Homeಮುಖಪುಟದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

ದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರವು ಫೆಬ್ರವರಿ 18ರ ಭಾನುವಾರವಾದ ಇಂದು ರೈತ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲಿದೆ. ತಮ್ಮ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿಗಾಗಿ ರೈತರ ಬೇಡಿಕೆಗಳನ್ನು ಪರಿಹರಿಸಲು ವಿಫಲವಾದ ಕಾರಣ ಹಿಂದಿನ ಸುತ್ತಿನ ಮಾತುಕತೆಗಳು ವಿಫಲವಾಗಿವೆ.

ಈ ನಡುವೆ, ಹರಿಯಾಣದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 19 ರವರೆಗೆ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ. ಸರ್ಕಾರವು ಈ ಹಿಂದೆ ಫೆಬ್ರವರಿ 13 ರಿಂದ ಫೆಬ್ರವರಿ 15 ರವರೆಗೆ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸುವುದನ್ನು ವಿಸ್ತರಿಸಿತ್ತು.

ಎಂಎಸ್‌ಪಿಗೆ ಕಾನೂನು ಮಾನ್ಯತೆ ಮತ್ತು ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ. ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಪ್ರಾಯೋಗಿಕವಲ್ಲ’ ಎಂದು ಹೇಳಿದ್ದಾರೆ.

ಸಮಸ್ಯೆಗಳ ಪರಿಹಾರಕ್ಕಾಗಿ ನಾಲ್ಕನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ್ ರೈ ಅವರನ್ನು ಭೇಟಿ ಮಾಡುವ ಒಂದು ದಿನ ಮೊದಲು ರೈತ ಮುಖಂಡರು ಶನಿವಾರ ‘ಚೆಂಡು ಸರ್ಕಾರದ ಅಂಗಳದಲ್ಲಿದೆ’ ಎಂದು ಹೇಳಿದರು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದಿಂದ ಕರೆ ನೀಡಲಾದ ಅವರ ‘ದೆಹಲಿ ಚಲೋ’ ಮೆರವಣಿಗೆಯ ಐದನೇ ದಿನದಂದು ರೈತರು ಪಂಜಾಬ್-ಹರಿಯಾಣ ಗಡಿಯ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲೆ ಬೀಡುಬಿಟ್ಟಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಅವರ ಬೇಡಿಕೆಗಳನ್ನು ಕೇಂದ್ರವು ಒಪ್ಪಿಕೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧುವಲ್ಲ’:

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಮತ್ತು ಬೆಲೆ ವ್ಯವಸ್ಥೆ ಸೇರಿದಂತೆ ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು “ಕಾರ್ಯಸಾಧುವಲ್ಲ” ಎಂದು ಹೇಳಿದ್ದಾರೆ.

ಆದರೆ. ರೈತರು ಮಾತ್ರ ಸಾಲ ಮನ್ನಾ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತ್ರಿ ನೀಡುವುದರ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿಗಾಗಿ ಒತ್ತಾಯಿಸಿ ಅವರು ನಡೆಸುತ್ತಿರುವ ಹೋರಾಟ ಭಾನುವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

ಹೆಚ್ಚಿನ ಸಮಯ ಕೇಳಿದ ಕೇಂದ್ರ:

ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಸರ್ಕಾರ ಸ್ವಲ್ಪ ಸಮಯಾವಕಾಶ ಕೇಳಿದೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಮುಖಂಡರು ಭಾನುವಾರ ಹೇಳಿದ್ದಾರೆ.

‘ಶಂಭು ಗಡಿಯಲ್ಲಿ ಇದು ನಮ್ಮ ಆರನೇ ದಿನ, ಇಂದು ನಾವು ಸರ್ಕಾರದ ಜೊತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸುತ್ತಿದ್ದೇವೆ, ಸರ್ಕಾರ ಸ್ವಲ್ಪ ಸಮಯ ಕೇಳಿದೆ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದೆ. ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ.

ಫೆಬ್ರವರಿ 21 ರಂದು 4 ರಾಜ್ಯಗಳಲ್ಲಿ ಧರಣಿ

ಫೆಬ್ರವರಿ 21 ರಂದು ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ರೈತರು ಧರಣಿ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ಇಂದು ನಾಲ್ಕನೇ ಸುತ್ತಿನ ಮಾತುಕತೆ

ರೈತ ಸಂಘದ ಮುಖಂಡರು ಭಾನುವಾರ ಕೇಂದ್ರ ಸಚಿವರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದು, ದೆಹಲಿ ಚಲೋ ಮೆರವಣಿಗೆಯನ್ನು ಅಂತ್ಯಗೊಳಿಸಲು ಕೇಂದ್ರವು ಆಶಿಸುತ್ತಿದೆ. ಆದಾಗ್ಯೂ, ರೈತರು ಎಂಎಸ್‌ಪಿಯ ಕಾನೂನು ಖಾತರಿಗಾಗಿ ತಮ್ಮ ಬೇಡಿಕೆಯನ್ನು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ; ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...