Homeಮುಖಪುಟದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

ದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ರೈತರ ಚಲೋ ದೆಹಲಿ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ ಎರಡನೇ ದಿನದಂದು, ‘ನಾವು ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ’ ಎಂದು ರೈತ ಮುಖಂಡರು ಹೇಳಿದ್ದಾರೆ. ‘ಸರ್ಕಾರವು ನಮ್ಮ ವಿರುದ್ಧ ಪೊಲೀಸ್ ಶಕ್ತಿ ಬಳಸುತ್ತಿದ್ದು, ರೈತರನ್ನು ಶತ್ರುಗಳಂತೆ ನಡೆಸಿಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕೇಂದ್ರ ಸರ್ಕಾರವು, ‘ರೈತರೊಂದಿಗೆ ನಾವು ಮಾತನಾಡಲು ಸಿದ್ಧರಿದ್ದು, ಈಗಾಗಲೇ ಅವರ ಅನೇಕ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ’ ಎಂದು ಸಮರ್ಥಿಸಿಕೊಂಡಿದೆ. ಆದರೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ರೈತರು ರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಾಗದಂತೆ ಹರ್ಯಾಣ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪಂಜಾಬ್ ಸರ್ಕಾರ ರೈತರನ್ನು ತಡೆದಿಲ್ಲ. ಆದರೆ ಪೊಲೀಸರು ಅಲರ್ಟ್ ಆಗಿದ್ದಾರೆ. ಮಂಗಳವಾರ ರೈತರು ಮತ್ತು ಹರಿಯಾಣ ಪೊಲೀಸರ ನಡುವಿನ ಘರ್ಷಣೆಯ ನಂತರ ಆಸ್ಪತ್ರೆಗಳಿಗೂ ಎಚ್ಚರಿಕೆ ನೀಡಲಾಗಿದೆ.

ರೈತರ ಪ್ರತಿಭಟನೆ 2ನೇ ದಿನದ ಬೆಳವಣಿಗೆಗಳು:

ಪಂಜಾಬ್-ಹರಿಯಾಣ ಶಂಭು ಗಡಿಯಿಂದ ಮೆರವಣಿಗೆ ಪುನರಾರಂಭವಾಗುತ್ತಿದ್ದಂತೆ ಪೊಲೀಸರು ಮತ್ತು ರೈತರ ನಡುವೆ ಹೊಸ ಘರ್ಷಣೆ ಪ್ರಾರಂಭವಾಯಿತು. ಹರಿಯಾಣ ಪೊಲೀಸರು ಹಲವು ಸುತ್ತಿನ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಪ್ರದೇಶದೊಳಗೆ ರೈತರ ಮೇಲೆ ದಾಳಿ ಮಾಡಲು ಹರಿಯಾಣ ಸರ್ಕಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಬುಧವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ರೈತರು ಸೇರಿಕೊಂಡರು. ಆದರೆ, ಅವರು ಇನ್ನೂ ಹರಿಯಾಣವನ್ನು ಪ್ರವೇಶಿಸಿಲ್ಲ. ಎರಡನೇ ದಿನದಂದು ದೆಹಲಿಯಲ್ಲಿ ಹೆಚ್ಚಿನ ಭದ್ರತಾ ತಪಾಸಣೆಗಳನ್ನು ಮಾಡಲಾಗಿದ್ದು, ದೆಹಲಿಯ ಹಲವಾರು ಪ್ರದೇಶಗಳಲ್ಲಿ ದೀರ್ಘ ಟ್ರಾಫಿಕ್ ಜಾಮ್ ಕಂಡುಬಂದಿದೆ.

ಶಂಭು ಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, ರೈತರ ಪ್ರತಿಭಟನೆ ಶಾಂತಿಯುತ ಮತ್ತು ರಾಜಕೀಯ ರಹಿತವಾಗಿರುವಾಗ ಸರ್ಕಾರ ರೈತರ ಮಾನಹಾನಿ ಮಾಡುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ರೈತರ ವಿರುದ್ಧ ಅರೆಸೇನಾ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು. ನಮಗೆ ನಮ್ಮ ಬೇಡಿಕೆಗಳು ಮಾತ್ರ ಬೇಕು… ಸರ್ಕಾರದೊಂದಿಗೆ ಘರ್ಷಣೆಗೆ ನಾವು ಬಯಸುವುದಿಲ್ಲ’ ಎಂದು ಪಧೇರ್ ಹೇಳಿದರು.

ತಾವು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುತ್ತೇವೆ ಮತ್ತು ಎಂಎಸ್‌ಪಿಗೆ ಕಾನೂನು ಭರವಸೆ ನೀಡುತ್ತೇವೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿಕೊಂಡ ನಂತರ ರಾಜಕೀಯ ಗದ್ದಲ ಆರಂಭವಾಯಿತು. ಆದರೆ ಯುಪಿಎ ಸರ್ಕಾರ 2010ರಲ್ಲಿ ಸ್ವಾಮಿನಾಥನ್ ಆಯೋಗದ ಶಿಫಾರಸನ್ನು ತಿರಸ್ಕರಿಸಿತ್ತು.

‘ಈ ಶಿಫಾರಸನ್ನು ನಮ್ಮ ಸರ್ಕಾರವು ಅಂಗೀಕರಿಸಿಲ್ಲ. ಏಕೆಂದರೆ, ಎಂಎಸ್‌ಪಿ ಅನ್ನು ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗವು ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ಮತ್ತು ವಿವಿಧ ಸಂಬಂಧಿತ ಅಂಶಗಳನ್ನು ಪರಿಗಣಿಸಿ ಶಿಫಾರಸು ಮಾಡಿದೆ. ಆದ್ದರಿಂದ, ವೆಚ್ಚದ ಮೇಲೆ ಕನಿಷ್ಠ 50% ಹೆಚ್ಚಳವನ್ನು ಸೂಚಿಸುವುದು ವಿರೂಪಗೊಳಿಸಬಹುದು’ ಎಂದು 2010ರಲ್ಲಿ ಯುಪಿಎ ಸರ್ಕಾರ ಉತ್ತರಿಸಿತ್ತು.

ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದ ರೈತ ಸಂಘಗಳು ಸಭೆಯ ಕುರಿತು ಸರ್ಕಾರದಿಂದ ಸಂದೇಶಗಳನ್ನು ಸ್ವೀಕರಿಸಿದ್ದೇವೆ ರೈತ ಮುಖಂಡರು ಹೇಳಿದರು. ಬಿಕೆಯು (ಏಕ್ತಾ-ಉಘ್ರಹನ್) ಪಂಜಾಬ್‌ನಲ್ಲಿ ಗುರುವಾರ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲ್ ರೋಕೋವನ್ನು ಘೋಷಿಸಿತು, ಇದು ಪ್ರತಿಭಟನಾ ನಿರತ ರೈತ ಸಂಘಟನೆಗಳಿಗೆ ಬೆಂಬಲದ ಸಂಕೇತವಾಗಿದೆ.

ರೈತರು ಸಾಮಾನ್ಯ ಜನರಿಗೆ ತೊಂದರೆ ಕೊಡಬಾರದು ಎಂದು ಕೇಂದ್ರ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ. ”ರೈತ ಸಂಘದೊಂದಿಗೆ ಸಕಾರಾತ್ಮಕ ಚರ್ಚೆ ನಡೆಸುವ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ಮೊದಲೇ ಹೇಳಿದ್ದೆ.ಜನರು ಯೋಚಿಸದೆ ಪರಿಸ್ಥಿತಿಯನ್ನು ಟೀಕಿಸುವ ರೀತಿಯಲ್ಲಿ ಮಾತನಾಡುವ ಕಾನೂನಿನ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂಬುದನ್ನು ರೈತ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ನಾವು ಅದರ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚರ್ಚಿಸಲು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ಸಿಂಘು ಗಡಿಯಲ್ಲಿ ರೈತರ ಮೇಲೆ ಬಲ ಪ್ರಯೋಗಕ್ಕೆ ನಿರ್ದೇಶನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...