Homeಮುಖಪುಟದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

ದೆಹಲಿ ಚಲೋ ಮೆರವಣಿಗೆ: ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ ಎಂದ ರೈತ ಮುಖಂಡರು

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ರೈತರ ಚಲೋ ದೆಹಲಿ ಮೆರವಣಿಗೆಗೆ ಪೊಲೀಸರು ಅಡ್ಡಿಪಡಿಸಿದ ಎರಡನೇ ದಿನದಂದು, ‘ನಾವು ಪೊಲೀಸರೊಂದಿಗೆ ಘರ್ಷಣೆ ಬಯಸುವುದಿಲ್ಲ’ ಎಂದು ರೈತ ಮುಖಂಡರು ಹೇಳಿದ್ದಾರೆ. ‘ಸರ್ಕಾರವು ನಮ್ಮ ವಿರುದ್ಧ ಪೊಲೀಸ್ ಶಕ್ತಿ ಬಳಸುತ್ತಿದ್ದು, ರೈತರನ್ನು ಶತ್ರುಗಳಂತೆ ನಡೆಸಿಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕೇಂದ್ರ ಸರ್ಕಾರವು, ‘ರೈತರೊಂದಿಗೆ ನಾವು ಮಾತನಾಡಲು ಸಿದ್ಧರಿದ್ದು, ಈಗಾಗಲೇ ಅವರ ಅನೇಕ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ’ ಎಂದು ಸಮರ್ಥಿಸಿಕೊಂಡಿದೆ. ಆದರೆ, ಪಂಜಾಬ್-ಹರಿಯಾಣ ಗಡಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ರೈತರು ರಾಜ್ಯಕ್ಕೆ ಪ್ರವೇಶಿಸಲು ಸಾಧ್ಯವಾಗದಂತೆ ಹರ್ಯಾಣ ಪೊಲೀಸರು ಕಾವಲು ಕಾಯುತ್ತಿದ್ದಾರೆ. ಪಂಜಾಬ್ ಸರ್ಕಾರ ರೈತರನ್ನು ತಡೆದಿಲ್ಲ. ಆದರೆ ಪೊಲೀಸರು ಅಲರ್ಟ್ ಆಗಿದ್ದಾರೆ. ಮಂಗಳವಾರ ರೈತರು ಮತ್ತು ಹರಿಯಾಣ ಪೊಲೀಸರ ನಡುವಿನ ಘರ್ಷಣೆಯ ನಂತರ ಆಸ್ಪತ್ರೆಗಳಿಗೂ ಎಚ್ಚರಿಕೆ ನೀಡಲಾಗಿದೆ.

ರೈತರ ಪ್ರತಿಭಟನೆ 2ನೇ ದಿನದ ಬೆಳವಣಿಗೆಗಳು:

ಪಂಜಾಬ್-ಹರಿಯಾಣ ಶಂಭು ಗಡಿಯಿಂದ ಮೆರವಣಿಗೆ ಪುನರಾರಂಭವಾಗುತ್ತಿದ್ದಂತೆ ಪೊಲೀಸರು ಮತ್ತು ರೈತರ ನಡುವೆ ಹೊಸ ಘರ್ಷಣೆ ಪ್ರಾರಂಭವಾಯಿತು. ಹರಿಯಾಣ ಪೊಲೀಸರು ಹಲವು ಸುತ್ತಿನ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದಾರೆ. ಪಂಜಾಬ್ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಪ್ರದೇಶದೊಳಗೆ ರೈತರ ಮೇಲೆ ದಾಳಿ ಮಾಡಲು ಹರಿಯಾಣ ಸರ್ಕಾರಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದ್ದಾರೆ.

ಬುಧವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ರೈತರು ಸೇರಿಕೊಂಡರು. ಆದರೆ, ಅವರು ಇನ್ನೂ ಹರಿಯಾಣವನ್ನು ಪ್ರವೇಶಿಸಿಲ್ಲ. ಎರಡನೇ ದಿನದಂದು ದೆಹಲಿಯಲ್ಲಿ ಹೆಚ್ಚಿನ ಭದ್ರತಾ ತಪಾಸಣೆಗಳನ್ನು ಮಾಡಲಾಗಿದ್ದು, ದೆಹಲಿಯ ಹಲವಾರು ಪ್ರದೇಶಗಳಲ್ಲಿ ದೀರ್ಘ ಟ್ರಾಫಿಕ್ ಜಾಮ್ ಕಂಡುಬಂದಿದೆ.

ಶಂಭು ಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್, ರೈತರ ಪ್ರತಿಭಟನೆ ಶಾಂತಿಯುತ ಮತ್ತು ರಾಜಕೀಯ ರಹಿತವಾಗಿರುವಾಗ ಸರ್ಕಾರ ರೈತರ ಮಾನಹಾನಿ ಮಾಡುತ್ತಿದೆ ಎಂದು ಬೇಸರ ಹೊರಹಾಕಿದ್ದಾರೆ.

ರೈತರ ವಿರುದ್ಧ ಅರೆಸೇನಾ ಪಡೆಗಳನ್ನು ನಿಯೋಜಿಸಿರುವುದು ಇದೇ ಮೊದಲು. ನಮಗೆ ನಮ್ಮ ಬೇಡಿಕೆಗಳು ಮಾತ್ರ ಬೇಕು… ಸರ್ಕಾರದೊಂದಿಗೆ ಘರ್ಷಣೆಗೆ ನಾವು ಬಯಸುವುದಿಲ್ಲ’ ಎಂದು ಪಧೇರ್ ಹೇಳಿದರು.

ತಾವು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸುತ್ತೇವೆ ಮತ್ತು ಎಂಎಸ್‌ಪಿಗೆ ಕಾನೂನು ಭರವಸೆ ನೀಡುತ್ತೇವೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿಕೊಂಡ ನಂತರ ರಾಜಕೀಯ ಗದ್ದಲ ಆರಂಭವಾಯಿತು. ಆದರೆ ಯುಪಿಎ ಸರ್ಕಾರ 2010ರಲ್ಲಿ ಸ್ವಾಮಿನಾಥನ್ ಆಯೋಗದ ಶಿಫಾರಸನ್ನು ತಿರಸ್ಕರಿಸಿತ್ತು.

‘ಈ ಶಿಫಾರಸನ್ನು ನಮ್ಮ ಸರ್ಕಾರವು ಅಂಗೀಕರಿಸಿಲ್ಲ. ಏಕೆಂದರೆ, ಎಂಎಸ್‌ಪಿ ಅನ್ನು ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗವು ವಸ್ತುನಿಷ್ಠ ಮಾನದಂಡಗಳ ಆಧಾರದ ಮೇಲೆ ಮತ್ತು ವಿವಿಧ ಸಂಬಂಧಿತ ಅಂಶಗಳನ್ನು ಪರಿಗಣಿಸಿ ಶಿಫಾರಸು ಮಾಡಿದೆ. ಆದ್ದರಿಂದ, ವೆಚ್ಚದ ಮೇಲೆ ಕನಿಷ್ಠ 50% ಹೆಚ್ಚಳವನ್ನು ಸೂಚಿಸುವುದು ವಿರೂಪಗೊಳಿಸಬಹುದು’ ಎಂದು 2010ರಲ್ಲಿ ಯುಪಿಎ ಸರ್ಕಾರ ಉತ್ತರಿಸಿತ್ತು.

ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದ ರೈತ ಸಂಘಗಳು ಸಭೆಯ ಕುರಿತು ಸರ್ಕಾರದಿಂದ ಸಂದೇಶಗಳನ್ನು ಸ್ವೀಕರಿಸಿದ್ದೇವೆ ರೈತ ಮುಖಂಡರು ಹೇಳಿದರು. ಬಿಕೆಯು (ಏಕ್ತಾ-ಉಘ್ರಹನ್) ಪಂಜಾಬ್‌ನಲ್ಲಿ ಗುರುವಾರ ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ರೈಲ್ ರೋಕೋವನ್ನು ಘೋಷಿಸಿತು, ಇದು ಪ್ರತಿಭಟನಾ ನಿರತ ರೈತ ಸಂಘಟನೆಗಳಿಗೆ ಬೆಂಬಲದ ಸಂಕೇತವಾಗಿದೆ.

ರೈತರು ಸಾಮಾನ್ಯ ಜನರಿಗೆ ತೊಂದರೆ ಕೊಡಬಾರದು ಎಂದು ಕೇಂದ್ರ ಸಚಿವ ಅರ್ಜುನ್ ಮುಂಡಾ ಹೇಳಿದ್ದಾರೆ. ”ರೈತ ಸಂಘದೊಂದಿಗೆ ಸಕಾರಾತ್ಮಕ ಚರ್ಚೆ ನಡೆಸುವ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದು ಮೊದಲೇ ಹೇಳಿದ್ದೆ.ಜನರು ಯೋಚಿಸದೆ ಪರಿಸ್ಥಿತಿಯನ್ನು ಟೀಕಿಸುವ ರೀತಿಯಲ್ಲಿ ಮಾತನಾಡುವ ಕಾನೂನಿನ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂಬುದನ್ನು ರೈತ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ನಾವು ಅದರ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚರ್ಚಿಸಲು ಪ್ರಯತ್ನಿಸಬೇಕು’ ಎಂದು ಅವರು ಹೇಳಿದರು.

ಇದನ್ನೂ ಓದಿ; ಚಲೋ ದೆಹಲಿ ಮೆರವಣಿಗೆ: ಸಿಂಘು ಗಡಿಯಲ್ಲಿ ರೈತರ ಮೇಲೆ ಬಲ ಪ್ರಯೋಗಕ್ಕೆ ನಿರ್ದೇಶನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...