Homeಮುಖಪುಟದೆಹಲಿ ಚಲೋ ಮೆರವಣಿಗೆ: ನಾಳೆ ದೆಹಲಿಯತ್ತ ರೈತರ ಪಯಣ, ಅಶ್ರುವಾಯು ಎದುರಿಸಲು ಸಿದ್ಧರಾದ ಅನ್ನದಾತರು

ದೆಹಲಿ ಚಲೋ ಮೆರವಣಿಗೆ: ನಾಳೆ ದೆಹಲಿಯತ್ತ ರೈತರ ಪಯಣ, ಅಶ್ರುವಾಯು ಎದುರಿಸಲು ಸಿದ್ಧರಾದ ಅನ್ನದಾತರು

- Advertisement -
- Advertisement -

5 ವರ್ಷಗಳಲ್ಲಿ ಮೂರು ಬಗೆಯ ಬೇಳೆಕಾಳುಗಳು, ಮೆಕ್ಕೆಜೋಳ ಮತ್ತು ಹತ್ತಿಯನ್ನು ಹಳೆಯ ಎಂಎಸ್‌ಪಿ ದರದಲ್ಲಿ ಖರೀದಿಸುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ರೈತರು ನಾಳೆ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಲಿದ್ದಾರೆ. ಅಶ್ರುವಾಯು ಶೆಲ್‌ಗಳನ್ನು ಎದುರಿಸಲು ಮತ್ತು  ಕಬ್ಬಿಣದ ಗುರಾಣಿಗಳನ್ನು ಎದುರಿಸಲು ಅವರು ಶಂಭು- ಪಂಜಾಬ್ ಮತ್ತು ಹರಿಯಾಣ ಗಡಿಯಲ್ಲಿ ಸಾಕಷ್ಟು ಸೆಣಬಿನ ಚೀಲಗಳನ್ನು ಸಂಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ.

‘ಅಪರಿಚಿತ ಆಗಂತುಕರು’ ಪತ್ರಕರ್ತರಂತೆ ನಟಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ತಡೆಯಲು ಮಾಧ್ಯಮದವರಿಗೆ ಗುರುತಿನ ಚೀಟಿಗಳನ್ನು ನೀಡಲಾಗಿದೆ. ಶಾಂತಿಯುತವಾಗಿ ದೆಹಲಿಯತ್ತ ಪಾದಯಾತ್ರೆಯನ್ನು ಪುನರಾರಂಭಿಸುವುದಾಗಿ ರೈತರು ಹೇಳಿದ್ದಾರೆ. ‘ನಮ್ಮ ವಿರುದ್ಧ ಬಲಪ್ರಯೋಗ ಮಾಡದಂತೆ ನಾವು ಸರ್ಕಾರಕ್ಕೆ ಮನವಿ ಮಾಡಲು ಬಯಸುತ್ತೇವೆ. ನಾವು ಶಾಂತಿಯುತವಾಗಿ ಪ್ರತಿಭಟಿಸಲು ಬಯಸುತ್ತೇವೆ’ ಎಂದು ರೈತರು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್ ಅವರು, ‘ಕೇಂದ್ರದ ಪ್ರಸ್ತಾಪ’ವನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ‘ಸರ್ಕಾರವು (ಭಾನುವಾರ ರಾತ್ರಿ) ಪ್ರಸ್ತಾವನೆಯನ್ನು ಮಾಡಿತು ಮತ್ತು ನಾವು ಅದನ್ನು ಅಧ್ಯಯನ ಮಾಡಿದ್ದೇವೆ. ಎಂಎಸ್‌ಪಿ ಕೇವಲ ಎರಡು ಅಥವಾ ಮೂರು ಬೆಳೆಗಳಿಗೆ ಅನ್ವಯಿಸುತ್ತದೆ; ಇತರ ರೈತರು ತಮ್ಮನ್ನು ತಾವು ಕಾಪಾಡಿಕೊಳ್ಳಲು ಬಿಡುವುದರಲ್ಲಿ ಅರ್ಥವಿಲ್ಲ’ ಎಂದು ಅವರು ಹೇಳಿದರು.

ಸಂಯುಕ್ತ ಕಿಸಾನ್ ಮೋರ್ಚಾ – ರೈತ ಸಂಘಗಳ ಐಕ್ಯ ಹೋರಾಟವು ಈ ಸುತ್ತಿನ ಪ್ರತಿಭಟನೆಯನ್ನು ಮುನ್ನಡೆಸುವವರೊಂದಿಗೆ ನೇರವಾಗಿ ಸಂಬಂಧ ಹೊಂದಿಲ್ಲ. ಸುಮಾರು 200 ಸಂಘಗಳ ಬೆಂಬಲದೊಂದಿಗೆ ರೈತರು ಫೆಬ್ರವರಿ 13 ರಂದು ದೆಹಲಿಯಲ್ಲಿ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದರು. ಶಂಭು ಗಡಿಯಲ್ಲಿ ಜಮಾಯಿಸಿದ ಪ್ರತಿಭಟನಾಕಾರರ ವಿರುದ್ಧ ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಲಾಯಿತು; ಡ್ರೋನ್‌ಗಳನ್ನು ಬಳಸಿ ಹೊಗೆಯ ಡಬ್ಬಿಗಳನ್ನು ಸಹ ಸ್ಪೋಟಿಸಲಾಯಿತು.

ಮಾರುಕಟ್ಟೆಯ ವ್ಯತ್ಯಯದಿಂದ ರೈತರನ್ನು ರಕ್ಷಿಸುವ ಉದ್ದೇಶದಿಂದ ಎಂಎಸ್‌ಪಿ ಕಾನೂನೊಂದರ ಬೇಡಿಕೆಯು ಪ್ರತಿಭಟನಾ ನಿರತ ರೈತರ ಪ್ರಮುಖ ವಿಷಯವಾಗಿದೆ. ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿ, ಹಿಂದಿನ ಪ್ರತಿಭಟನೆಯ ಸಂದರ್ಭದಲ್ಲಿ ಅವರ ವಿರುದ್ಧ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯಲು ಮತ್ತು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ನ್ಯಾಯಕ್ಕಾಗಿ ಅವರು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ; MSP ಕುರಿತು ಕಾನೂನು ತರಲು ಪ್ರಧಾನಿ ಅಧಿವೇಶನ ಕರೆಯಲಿ: ರೈತ ಮುಖಂಡರ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...