Homeಮುಖಪುಟರೈತರ 'ದೆಹಲಿ ಚಲೋ' ದೇಶದಾದ್ಯಂತ ವಿಸ್ತರಣೆ? ಟ್ರಾಕ್ಟರ್ ಮೆರವಣಿಗೆ ಘೋಷಣೆ!

ರೈತರ ‘ದೆಹಲಿ ಚಲೋ’ ದೇಶದಾದ್ಯಂತ ವಿಸ್ತರಣೆ? ಟ್ರಾಕ್ಟರ್ ಮೆರವಣಿಗೆ ಘೋಷಣೆ!

- Advertisement -
- Advertisement -

ಖಾನೌರಿ ಗಡಿಯಲ್ಲಿ ಯುವ ರೈತ ಶುಭಕರಣ್‌ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಕೇಸ್‌ಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿನ್ನೆ “ಬ್ಲಾಕ್‌ ಪ್ರೈ ಡೇ( ಕರಾಳ ಶುಕ್ರವಾರ)”ವನ್ನು ಆಚರಿಸಿದೆ. ಇದಲ್ಲದೆ ರೈತರ ಬೇಡಿಕೆಗಳನ್ನು ಬೆಂಬಲಿಸಿ ಫೆಬ್ರವರಿ 26ರಂದು ದೇಶಾದ್ಯಂತ ಹೆದ್ದಾರಿಗಳಲ್ಲಿ ಟ್ರಾಕ್ಟರ್ ಮೆರವಣಿಗೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್‌ ಘೋಷಿಸಿದ್ದು, ರೈತರ ದೆಹಲಿ ಚಲೋ ದೇಶದಾದ್ಯಂತ ವಿಸ್ತರಿಸುವ ಸಾಧ್ಯತೆ ಇದೆ.

ಪಂಜಾಬ್ ಮತ್ತು ಹರಿಯಾಣ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಪಂಜಾಬ್‌ನ ಸರ್ಕಾರ ಯುವ ರೈತ ಶುಭಕರನ್‌ಗೆ ಹುತಾತ್ಮ ಸ್ಥಾನಮಾನ ನೀಡಬೇಕು ಮತ್ತು ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಇದಲ್ಲದೆ ರೈತ ಸಂಘಗಳು ಮಾರ್ಚ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಿಸಾನ್ ಮಹಾಪಂಚಾಯತ್‌ನ್ನು ಸಹ ನಡೆಸಲಿವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ ರೈತರು ಕೇಂದ್ರ ಗೃಹಸಚಿವ ಅಮಿತ್ ಶಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹಸಚಿವ ಅನಿಲ್ ವಿಜ್ ಅವರ ಪ್ರತಿಕೃತಿಗಳನ್ನೂ ಸುಟ್ಟುಹಾಕಿದ್ದಾರೆ. ಪ್ರತಿಭಟನಾನಿರತ ಶುಭಕರಣ್‌ ಸಿಂಗ್ ‘ಹತ್ಯೆ ’ಗಾಗಿ ಹರ್ಯಾಣ ಮುಖ್ಯಮಂತ್ರಿ ಗೃಹಸಚಿವರ ವಿರುದ್ಧ ಪ್ರಕರಣವನ್ನು ದಾಖಲಿಸಬೇಕು ಎಂದು ಎಸ್‌ಕೆಎಂ ಆಗ್ರಹಿಸಿದೆ.

ಈ ಮಧ್ಯೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಈಗಾಗಲೇ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಮರಣೋತ್ತರ ಪರೀಕ್ಷೆಯ ನಂತರ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಶುಕ್ರವಾರ ಪಂಜಾಬ್-ಹರಿರ್ಯಾಣ ಗಡಿಯಲ್ಲಿ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಓರ್ವ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಶಂಭು ಮತ್ತು ಖಾನೌರಿಯಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಮುಂದಾದ ರೈತರ ಮೇಲೆ ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ.

ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಸರ್ಕಾರದ ಪ್ರಸ್ತಾವನೆಯನ್ನು ರೈತ ಮುಖಂಡರು ತಿರಸ್ಕರಿಸಿದ ಬಳಿಕ ದೆಹಲಿ ಚಲೋ ಪ್ರತಿಭಟನೆ ಮರು ಪ್ರಾರಂಭವಾಗಿತ್ತು. ಶುಕ್ರವಾರ 62ವರ್ಷದ ರೈತ ದರ್ಶನ್ ಸಿಂಗ್ ಅವರು ಖಾನೌರಿ ಗಡಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಇವರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಮೃತಪಟ್ಟ ಐದನೇ ಪ್ರತಿಭಟನಾಕಾರರಾಗಿದ್ದಾರೆ. ಸಿಂಗ್ ಕುಟುಂಬವು ಸುಮಾರು ಎಂಟು ಎಕರೆ ಜಮೀನಿನ ಜೊತೆಗೆ ಎಂಟು ಲಕ್ಷ ರೂ.ಗಳ ಸಾಲದ ಹೊರೆಯನ್ನೂ ಹೊಂದಿದೆ. ಸಿಂಗ್ ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದರು. ಅವರನ್ನು ತಕ್ಷಣವೇ ಸಮೀಪದ ಪತ್ರನ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿತ್ತು. ಅಲ್ಲಿಯ ವೈದ್ಯರ ಸಲಹೆಯ ಮೇರೆಗೆ ಪಟಿಯಾಲಾದ ಸರಕಾರಿ ರಾಜಿಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ರೈತರು ಮತ್ತು ಪೊಲೀಸರ ನಡುವಿನ​ ಘರ್ಷಣೆಯಲ್ಲಿ ಸುಮಾರು 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೇಂದ್ರ ಸಚಿವರ 3 ಸದಸ್ಯರ ಸಮಿತಿಯನ್ನು ರಚಿಸಿದೆ ಮತ್ತು ರೈತರೊಂದಿಗೆ ಮಾತುಕತೆ ನಡೆಸುತ್ತಿದೆ. ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ, ರೈತ ಮುಖಂಡರಲ್ಲಿ ಮಾತುಕತೆ ಮೂಲಕ ಸಮಸ್ಯೆ ಈಡೇರಿಕೆಗೆ ಆಗ್ರಹಿಸಿದ್ದಾರೆ. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...