Homeಮುಖಪುಟರೈತರ 'ದೆಹಲಿ ಚಲೋ' ದೇಶದಾದ್ಯಂತ ವಿಸ್ತರಣೆ? ಟ್ರಾಕ್ಟರ್ ಮೆರವಣಿಗೆ ಘೋಷಣೆ!

ರೈತರ ‘ದೆಹಲಿ ಚಲೋ’ ದೇಶದಾದ್ಯಂತ ವಿಸ್ತರಣೆ? ಟ್ರಾಕ್ಟರ್ ಮೆರವಣಿಗೆ ಘೋಷಣೆ!

- Advertisement -
- Advertisement -

ಖಾನೌರಿ ಗಡಿಯಲ್ಲಿ ಯುವ ರೈತ ಶುಭಕರಣ್‌ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಪೊಲೀಸ್ ಕೇಸ್‌ಗೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿನ್ನೆ “ಬ್ಲಾಕ್‌ ಪ್ರೈ ಡೇ( ಕರಾಳ ಶುಕ್ರವಾರ)”ವನ್ನು ಆಚರಿಸಿದೆ. ಇದಲ್ಲದೆ ರೈತರ ಬೇಡಿಕೆಗಳನ್ನು ಬೆಂಬಲಿಸಿ ಫೆಬ್ರವರಿ 26ರಂದು ದೇಶಾದ್ಯಂತ ಹೆದ್ದಾರಿಗಳಲ್ಲಿ ಟ್ರಾಕ್ಟರ್ ಮೆರವಣಿಗೆ ನಡೆಸಲಾಗುವುದು ಎಂದು ರೈತ ಮುಖಂಡ ರಾಕೇಶ್ ಟಿಕಾಯತ್‌ ಘೋಷಿಸಿದ್ದು, ರೈತರ ದೆಹಲಿ ಚಲೋ ದೇಶದಾದ್ಯಂತ ವಿಸ್ತರಿಸುವ ಸಾಧ್ಯತೆ ಇದೆ.

ಪಂಜಾಬ್ ಮತ್ತು ಹರಿಯಾಣ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವಿನ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ಎಸ್‌ಕೆಎಂ ರಾಷ್ಟ್ರೀಯ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸಲು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ವಿವಿಧ ರಾಜ್ಯಗಳ ಹಲವಾರು ರೈತ ಮುಖಂಡರು ಭಾಗವಹಿಸಿದ್ದರು. ಈ ವೇಳೆ ಪಂಜಾಬ್‌ನ ಸರ್ಕಾರ ಯುವ ರೈತ ಶುಭಕರನ್‌ಗೆ ಹುತಾತ್ಮ ಸ್ಥಾನಮಾನ ನೀಡಬೇಕು ಮತ್ತು ಅವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ. ಇದಲ್ಲದೆ ರೈತ ಸಂಘಗಳು ಮಾರ್ಚ್ 14ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಿಸಾನ್ ಮಹಾಪಂಚಾಯತ್‌ನ್ನು ಸಹ ನಡೆಸಲಿವೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಸಂಯುಕ್ತ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ ರೈತರು ಕೇಂದ್ರ ಗೃಹಸಚಿವ ಅಮಿತ್ ಶಾ, ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ರಾಜ್ಯ ಗೃಹಸಚಿವ ಅನಿಲ್ ವಿಜ್ ಅವರ ಪ್ರತಿಕೃತಿಗಳನ್ನೂ ಸುಟ್ಟುಹಾಕಿದ್ದಾರೆ. ಪ್ರತಿಭಟನಾನಿರತ ಶುಭಕರಣ್‌ ಸಿಂಗ್ ‘ಹತ್ಯೆ ’ಗಾಗಿ ಹರ್ಯಾಣ ಮುಖ್ಯಮಂತ್ರಿ ಗೃಹಸಚಿವರ ವಿರುದ್ಧ ಪ್ರಕರಣವನ್ನು ದಾಖಲಿಸಬೇಕು ಎಂದು ಎಸ್‌ಕೆಎಂ ಆಗ್ರಹಿಸಿದೆ.

ಈ ಮಧ್ಯೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್‌ ಈಗಾಗಲೇ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಮರಣೋತ್ತರ ಪರೀಕ್ಷೆಯ ನಂತರ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಶುಕ್ರವಾರ ಪಂಜಾಬ್-ಹರಿರ್ಯಾಣ ಗಡಿಯಲ್ಲಿ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಓರ್ವ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಶಂಭು ಮತ್ತು ಖಾನೌರಿಯಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಮುಂದಾದ ರೈತರ ಮೇಲೆ ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ.

ನಾಲ್ಕನೇ ಸುತ್ತಿನ ಮಾತುಕತೆಯಲ್ಲಿ ಸರ್ಕಾರದ ಪ್ರಸ್ತಾವನೆಯನ್ನು ರೈತ ಮುಖಂಡರು ತಿರಸ್ಕರಿಸಿದ ಬಳಿಕ ದೆಹಲಿ ಚಲೋ ಪ್ರತಿಭಟನೆ ಮರು ಪ್ರಾರಂಭವಾಗಿತ್ತು. ಶುಕ್ರವಾರ 62ವರ್ಷದ ರೈತ ದರ್ಶನ್ ಸಿಂಗ್ ಅವರು ಖಾನೌರಿ ಗಡಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಇವರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಮೃತಪಟ್ಟ ಐದನೇ ಪ್ರತಿಭಟನಾಕಾರರಾಗಿದ್ದಾರೆ. ಸಿಂಗ್ ಕುಟುಂಬವು ಸುಮಾರು ಎಂಟು ಎಕರೆ ಜಮೀನಿನ ಜೊತೆಗೆ ಎಂಟು ಲಕ್ಷ ರೂ.ಗಳ ಸಾಲದ ಹೊರೆಯನ್ನೂ ಹೊಂದಿದೆ. ಸಿಂಗ್ ಗುರುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪ್ರತಿಭಟನಾ ಸ್ಥಳದಲ್ಲಿ ಕುಸಿದು ಬಿದ್ದು ಪ್ರಜ್ಞಾಹೀನರಾಗಿದ್ದರು. ಅವರನ್ನು ತಕ್ಷಣವೇ ಸಮೀಪದ ಪತ್ರನ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿತ್ತು. ಅಲ್ಲಿಯ ವೈದ್ಯರ ಸಲಹೆಯ ಮೇರೆಗೆ ಪಟಿಯಾಲಾದ ಸರಕಾರಿ ರಾಜಿಂದ್ರ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ರೈತರು ಮತ್ತು ಪೊಲೀಸರ ನಡುವಿನ​ ಘರ್ಷಣೆಯಲ್ಲಿ ಸುಮಾರು 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೇಂದ್ರ ಸಚಿವರ 3 ಸದಸ್ಯರ ಸಮಿತಿಯನ್ನು ರಚಿಸಿದೆ ಮತ್ತು ರೈತರೊಂದಿಗೆ ಮಾತುಕತೆ ನಡೆಸುತ್ತಿದೆ. ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ, ರೈತ ಮುಖಂಡರಲ್ಲಿ ಮಾತುಕತೆ ಮೂಲಕ ಸಮಸ್ಯೆ ಈಡೇರಿಕೆಗೆ ಆಗ್ರಹಿಸಿದ್ದಾರೆ. ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾತನಾಡಿ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಥುರಾ ಭೂ ವಿವಾದ: ಫೆಬ್ರವರಿ 29ರಂದು ಅಲಹಾಬಾದ್ ಹೈಕೋರ್ಟಿನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...