Homeಚಳವಳಿದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ನೂರಾರು ರೈತ ಸಂಘಟನೆಗಳು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗಾಗಿ ಸಾವಿರಾರು ರೈತರು ದೆಹಲಿಗೆ ತೆರಳುತ್ತಿದ್ದರು. ಆದರೆ ಅವರನ್ನು ಗಡಿಯಲ್ಲಿಯೇ ತಡೆಯಲಾಯಿತು. ಇದರಿಂದ ಉದ್ರೇಕಗೊಂಡ ರೈತರು ಬ್ಯಾರಿಕೇಡ್‌ಗಳನ್ನು ನದಿಗೆ ಎಸೆದು ಮುನ್ನುಗ್ಗಿದರು.

ಪೊಲೀಸರು ಮತ್ತು ರೈತರ ನಡುವೆ ಘರ್ಷಣೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪೊಲೀಸರು ರೈತರ ಮೇಲೆ ಅಶ್ರುವಾಯು ಮತ್ತು ಜಲಾನಿಲ ದಾಳಿ ಮಾಡಿದ್ದಾರೆ. ಆದರೂ ರೈತರು ತಮ್ಮ ನಿಲುವಿನಿಂದ ಹಿಂದೆ ಸರಿಯಲು ಒಪ್ಪಲಿಲ್ಲ.

PC: NDTV

ಇದನ್ನೂ ಓದಿ: ವಿವಾದಾತ್ಮಕ ಕೃಷಿ ಕಾನೂನು: ರೈತರನ್ನು 2 ನೇ ಸುತ್ತಿನ ಚರ್ಚೆಗೆ ಆಹ್ವಾನಿಸಿದ ಕೇಂದ್ರ!

ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ: ಸರ್ಕಾರಕ್ಕೆ 15 ದಿನ ಗಡುವು ಕೊಟ್ಟು ’ರೈಲ್ ರೋಕೋ’ ವಾಪಾಸ್ ಪಡೆದ ಪಂಜಾಬ್ ರೈತ…

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್‌ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

PC: NDTV

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.


ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...