HomeUncategorized'ದೆಹಲಿ ಚಲೋ' ಪ್ರತಿಭಟನೆ: ಮತ್ತೊಬ್ಬ ರೈತ ಮೃತ್ಯು; 15 ದಿನಗಳಲ್ಲಿ ಆರನೇ ಸಾವು

‘ದೆಹಲಿ ಚಲೋ’ ಪ್ರತಿಭಟನೆ: ಮತ್ತೊಬ್ಬ ರೈತ ಮೃತ್ಯು; 15 ದಿನಗಳಲ್ಲಿ ಆರನೇ ಸಾವು

- Advertisement -
- Advertisement -

ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಮತ್ತೋರ್ವ ರೈತ ಸಾವನ್ನಪ್ಪಿದ್ದು, ಈ ಮೂಲಕ ಕಳೆದ 15 ದಿನಗಳಲ್ಲಿ ‘ದೆಹಲಿ ಚಲೋ’ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಒಟ್ಟು ಆರು ಮಂದಿ ರೈತರು ಮೃತಪಟ್ಟಂತಾಗಿದೆ.

ಮೃತ ರೈತನನ್ನು ಕರ್ನೈಲ್ ಸಿಂಗ್ (62) ಎಂದು ಗುರುತಿಸಲಾಗಿದೆ. ಪಂಜಾಬ್‌ನ ಪಟಿಯಾಲದ ಜಿಲ್ಲೆಯ ಪತ್ರಾಣ್ ಬಳಿಯ ಅರ್ನೊ ಖುರ್ದ್ ಗ್ರಾಮದ ನಿವಾಸಿಯಾಗಿರುವ ಇವರು, ಖನೌರಿ ಗಡಿ ಬಳಿ ದೆಹಲಿ ಚಲೋ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಈ ವೇಳೆ ಹೃದಯಾಘಾತ ಕಾಣಿಸಿಕೊಂಡಿದೆ. ಕೂಡಲೇ ಪಟಿಯಾಲದ ರಾಜಿಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಾಯಿಸಿತಾದರೂ, ಕರ್ನೈಲ್ ಸಿಂಗ್ ಅಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನೈಲ್ ಸಿಂಗ್ ತಮ್ಮ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರು ಒಂದೂವರೆ ಎಕರೆ ಭೂಮಿ ಹೊಂದಿದ್ದು, ಎಂಟು ಲಕ್ಷ ರೂಪಾಯಿ ಸಾಲಗಾರರಾಗಿದ್ದರು ಎಂದು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಪ್ರತಿನಿಧಿಗಳು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಸಂಘಟನೆಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫೂಲ್ ಪ್ರಕಾರ, ಫೆಬ್ರವರಿ 21ರಂದು ಖನೌರಿ ಗಡಿಯ ಬಳಿ ಪೊಲೀಸರು ಅಶ್ರುವಾಯು ಶೆಲ್ ದಾಳಿ ನಡೆಸಿದ್ದರಿಂದ, ಅಶ್ರುವಾಯು ಶೆಲ್ ಹೊಮ್ಮಿಸಿದ ಹೊಗೆಯನ್ನು ಸೇವಿಸಿ ಕರ್ನೈಲ್ ಸಿಂಗ್ ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದೆ.

ಫೆಬ್ರವರಿ 21ರಂದು 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾ ನಿರತ ಯುವ ರೈತ ಖನೌರಿ ಗಡಿಯಲ್ಲಿ ಮೃತಪಟ್ಟಿದ್ದು, ಪೊಲೀಸರು ಗುಂಡೇಟು ತಲೆಗೆ ತಗುಲಿದ್ದೇ ಶುಭಕರನ್ ಸಾವಿಗೆ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ಫೆ.13ರಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ದೆಹಲಿ ಚಲೋ ಹಮ್ಮಿಕೊಂಡಿದ್ದು, ಅವರನ್ನು ಪಂಜಾಬ್-ಹರಿಯಾಣದ ಶಂಭು ಮತ್ತು ಖನೌರಿ ಗಡಿಗಳಲ್ಲಿ ಹರಿಯಾಣ ಪೊಲೀಸರು ತಡೆದಿದ್ದಾರೆ. ಪೊಲೀಸರು ರೈತರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ : ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...