HomeUncategorized'ದೆಹಲಿ ಚಲೋ' ಪ್ರತಿಭಟನೆ: ಮಧ್ಯಾಹ್ನ 1 ಗಂಟೆಗೆ ರಾಜಧಾನಿಗೆ ರೈತರ ಪಾದಯಾತ್ರೆ, ಭಾರಿ ಪೊಲೀಸ್ ಭದ್ರತೆ

‘ದೆಹಲಿ ಚಲೋ’ ಪ್ರತಿಭಟನೆ: ಮಧ್ಯಾಹ್ನ 1 ಗಂಟೆಗೆ ರಾಜಧಾನಿಗೆ ರೈತರ ಪಾದಯಾತ್ರೆ, ಭಾರಿ ಪೊಲೀಸ್ ಭದ್ರತೆ

- Advertisement -
- Advertisement -

ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನೂರಕ್ಕೂ ಹೆಚ್ಚು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಪ್ರಾರಂಭಿಸಲಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ‘ದೆಹಲಿ ಚಲೋ’ ಮೆರವಣಿಗೆ ನಡೆಸಲಾಗುತ್ತಿದೆ.

ದೆಹಲಿ ಚಲೋ ಮೆರವಣಿಗೆಗೆ ಮುಂಚಿತವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ; ಮಧ್ಯಾಹ್ನ 1 ಗಂಟೆಗೆ ಮೆರವಣಿಗೆಗೆ ಮುಂಚಿತವಾಗಿ ಪೊಲೀಸರು ಅಂಬಾಲಾ-ದೆಹಲಿ ಗಡಿಯಲ್ಲಿ ಬ್ಯಾರಿಕೇಡ್ ಮಾಡಿದ್ದಾರೆ. ಹರಿಯಾಣ ಗಡಿ ಭಾಗದಲ್ಲಿ ಭಾರೀ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಂಬಾಲಾ ಜಿಲ್ಲಾಡಳಿತವು ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ಆದೇಶವನ್ನು ಹೊರಡಿಸಿದೆ. ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಯಾವುದೇ ಕಾನೂನುಬಾಹಿರ ಸಭೆಯನ್ನು ನಿರ್ಬಂಧಿಸುತ್ತದೆ.

ಅಂಬಾಲಾದಲ್ಲಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶುಕ್ರವಾರ ರಜೆ ಇರಲಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಅಂಬಲ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಂಭು ಗಡಿ ಬಿಂದು – ರಾಜಪುರ (ಪಂಜಾಬ್)-ಅಂಬಾಲ (ಹರಿಯಾಣ) – ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಬಹುಪದರದ ಬ್ಯಾರಿಕೇಡಿಂಗ್ ಈಗಾಗಲೇ ಜಾರಿಯಲ್ಲಿದೆ. ಶಂಭು ಗಡಿಯಲ್ಲೂ ಜಲಫಿರಂಗಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಪೊಲೀಸರು ಮೆರವಣಿಗೆಗೆ ಮುಂಚಿತವಾಗಿ ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. “ದೆಹಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದ ಗಡಿ ಬಿಂದುಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ನಿಯೋಜನೆಯನ್ನು ಮಾಡಲಾಗಿದೆ. ಆದರೆ, ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶಂಬು ಗಡಿಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಇದು ಹೆಚ್ಚಾಗಬಹುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಡಿ ಮತ್ತು ದೆಹಲಿಯ ಕೇಂದ್ರ ಭಾಗದಲ್ಲಿ ಭದ್ರತಾ ವ್ಯವಸ್ಥೆಗಳಿಂದಾಗಿ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದರು. ದೆಹಲಿಗೆ ಅವರ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

“ಮೆರವಣಿಗೆ 297ನೇ ದಿನಕ್ಕೆ ಕಾಲಿಟ್ಟಿದ್ದು, ಖಾನೌರಿ ಗಡಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ. ಮಧ್ಯಾಹ್ನ 1 ಗಂಟೆಗೆ 101 ರೈತರ ಜಾಥಾ ಶಂಭು ಗಡಿಯಿಂದ ದೆಹಲಿಯತ್ತ ಸಾಗಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು (ರೈತರ ವಿರುದ್ಧ) ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.

ಭೂ ಸ್ವಾಧೀನ ಕಾಯಿದೆ, 2013 ರ ಮರುಸ್ಥಾಪನೆ ಮತ್ತು 2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಕೂಡ ಅವರ ಬೇಡಿಕೆಗಳ ಭಾಗವಾಗಿದೆ.

ಇದನ್ನೂ ಓದಿ; ಉತ್ತರ ಪ್ರದೇಶ ಕಾಂಗ್ರೆಸ್​ಗೆ ಮೇಜರ್ ಸರ್ಜರಿ : ಎಲ್ಲಾ ಘಟಕಗಳ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...