Homeಚಳವಳಿದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

- Advertisement -
- Advertisement -

ಕೇಂದ್ರದ ಜನವಿರೋಧಿ ನೀತಿಗಳ ವಿರುದ್ದ ಅಖಿಲ ಭಾರತ ಮುಷ್ಕರಕ್ಕೆ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಸೇರಿದಂತೆ ದೇಶ ವಿರೋಧ ಪಕ್ಷಗಳು ಬೆಂಬಲ ನೀಡಿ ಯಶಸ್ವಿ ಮುಷ್ಕರ ನಡೆಯುತ್ತಿದೆ. ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಇಟ್ಟುಕೊಂಡು ರೈತರು ಹಮ್ಮಿಕೊಂಡಿದ್ದ ”ದೆಹಲಿ ಚಲೋ’’ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಪಿರಂಗಿ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆದು ಬಂದಿಸುತ್ತಿರುವುದರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ, “ದೆಹಲಿ ಬಳಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಚಿತ್ರಗಳನ್ನು ನೋಡಿ ಕಳವಳಗೊಂಡದ್ದೇನೆ. ರೈತರನ್ನು ಗೌರವದಿಂದ ಕಾಣುವಂತೆ, ದಯವಿಟ್ಟು ಅವರೊಂದಿಗೆ ತೊಡಗಿಸಿಕೊಂಡು, ಅವರ ಮಾತುಗಳನ್ನು ಕೇಳಿ ಎಂದು ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಗಡಿಯಲ್ಲಿಯೇ ರೈತರನ್ನು ತಡೆದ ಪೊಲೀಸರು; ಮೇಧಾ ಪಾಟ್ಕರ್ ಸೇರಿ ಹಲವು ರೈತರ ಬಂಧನ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಮೋದಿ ಸರ್ಕಾರದ ಕ್ರೌರ್ಯದ ವಿರುದ್ಧ ದೇಶದ ರೈತ ದೃಡವಾಗಿ ನಿಂತಿದ್ದಾನೆ” ಎಂದು ಟ್ವೀಟ್ ಮಾಡಿದ್ದಾರೆ.

“ಅನ್ನದಾತರಿಗೆ ಅಶ್ರವಾಯು ಮತ್ತು ನೀರಿನ ಫಿರಂಗಿಗಳು. ಆದರೆ ಸರ್ಕಾರ ಕ್ರೌರ್ಯ ಮತ್ತು ವಿವೇಚನಾರಹಿತ ಶಕ್ತಿಯ ಮೂಲಕ ರೈತ-ಕಾರ್ಮಿಕರ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ!” ಸಿಪಿಐಎಂ ಹೇಳಿದೆ.

ಕಾಂಗ್ರೆಸ್ ಪಕ್ಷವು, “ಕೆಲವು ಸರ್ಕಾರಗಳು ‘ಜನರಿಂದ, ಜನರಿಗಾಗಿ, ಜನರದ್ದೇ’ ಇತರರು ಸರ್ಕಾರಗಳು ಕೇವಲ ‘ಜನರ ವಿರುದ್ಧ'” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

“ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ದೆಹಲಿಗೆ ಮೆರವಣಿಗೆ ಮಾಡುವುದನ್ನು ತಡೆಯಲು ಹರಿಯಾಣ, ಯುಪಿ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರಗಳು ಭಾರಿ ದಬ್ಬಾಳಿಕೆ ನಡೆಸುತ್ತಿದೆ. ನೂರಾರು ಜನರನ್ನು ಬಂಧಿಸಲಾಗಿದೆ. ಇಂತಹ ದಾಳಿಗಳಿಂದ ಪ್ರತಿಭಟನೆಯ ದನಿಗಳನ್ನು ನಿಗ್ರಹಿಸಲು ಸಾಧ್ಯವಿಲ್ಲ” ಕಿಸಾನ್ ಸಭಾ ಹೇಳಿದೆ.

“ಕರಾಳ ಕೃಷಿ ಕಾನೂನುಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಮೆರವಣಿಗೆ ನಡೆಸುತ್ತಿರುವ ನಮ್ಮ ಅನ್ನದಾತರ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ. ಬಿಜೆಪಿ ಸರ್ಕಾರ ರೈತರ ಧ್ವನಿಯನ್ನು ಅವರ ಕ್ರೌರ್ಯ ಮತ್ತು ವಿವೇಚನಾರಹಿತ ಶಕ್ತಿಯಿಂದ ನಿಗ್ರಹಿಸಲು ಸಾಧ್ಯವಿಲ್ಲ.” ಎಂದು ಚತ್ತೀಸ್‌ಗಡ್‌ ಸಚಿವರಾದ ಟಿಎಸ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:  ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

 

ದನ್ನೂ ಓದಿ:  ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...