Homeಚಳವಳಿದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

- Advertisement -
- Advertisement -

ಕೇಂದ್ರದ ಜನವಿರೋಧಿ ನೀತಿಗಳ ವಿರುದ್ದ ಅಖಿಲ ಭಾರತ ಮುಷ್ಕರಕ್ಕೆ ರೈತ ಹಾಗೂ ಕಾರ್ಮಿಕ ಸಂಘಟನೆಗಳು ಸೇರಿದಂತೆ ದೇಶ ವಿರೋಧ ಪಕ್ಷಗಳು ಬೆಂಬಲ ನೀಡಿ ಯಶಸ್ವಿ ಮುಷ್ಕರ ನಡೆಯುತ್ತಿದೆ. ದೆಹಲಿಯಲ್ಲಿ ರೈತರ ಸಮಸ್ಯೆಗಳನ್ನು ಇಟ್ಟುಕೊಂಡು ರೈತರು ಹಮ್ಮಿಕೊಂಡಿದ್ದ ”ದೆಹಲಿ ಚಲೋ’’ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಪಿರಂಗಿ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆದು ಬಂದಿಸುತ್ತಿರುವುದರ ವಿರುದ್ದ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೆಗೌಡ, “ದೆಹಲಿ ಬಳಿ ನಡೆಯುತ್ತಿರುವ ರೈತರ ಪ್ರತಿಭಟನೆಯ ಚಿತ್ರಗಳನ್ನು ನೋಡಿ ಕಳವಳಗೊಂಡದ್ದೇನೆ. ರೈತರನ್ನು ಗೌರವದಿಂದ ಕಾಣುವಂತೆ, ದಯವಿಟ್ಟು ಅವರೊಂದಿಗೆ ತೊಡಗಿಸಿಕೊಂಡು, ಅವರ ಮಾತುಗಳನ್ನು ಕೇಳಿ ಎಂದು ಕೇಂದ್ರ ಸರ್ಕಾರವನ್ನು ಕೋರುತ್ತೇನೆ. ಪೊಲೀಸ್ ಪಡೆ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಗಡಿಯಲ್ಲಿಯೇ ರೈತರನ್ನು ತಡೆದ ಪೊಲೀಸರು; ಮೇಧಾ ಪಾಟ್ಕರ್ ಸೇರಿ ಹಲವು ರೈತರ ಬಂಧನ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ಮೋದಿ ಸರ್ಕಾರದ ಕ್ರೌರ್ಯದ ವಿರುದ್ಧ ದೇಶದ ರೈತ ದೃಡವಾಗಿ ನಿಂತಿದ್ದಾನೆ” ಎಂದು ಟ್ವೀಟ್ ಮಾಡಿದ್ದಾರೆ.

“ಅನ್ನದಾತರಿಗೆ ಅಶ್ರವಾಯು ಮತ್ತು ನೀರಿನ ಫಿರಂಗಿಗಳು. ಆದರೆ ಸರ್ಕಾರ ಕ್ರೌರ್ಯ ಮತ್ತು ವಿವೇಚನಾರಹಿತ ಶಕ್ತಿಯ ಮೂಲಕ ರೈತ-ಕಾರ್ಮಿಕರ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಿಲ್ಲ!” ಸಿಪಿಐಎಂ ಹೇಳಿದೆ.

ಕಾಂಗ್ರೆಸ್ ಪಕ್ಷವು, “ಕೆಲವು ಸರ್ಕಾರಗಳು ‘ಜನರಿಂದ, ಜನರಿಗಾಗಿ, ಜನರದ್ದೇ’ ಇತರರು ಸರ್ಕಾರಗಳು ಕೇವಲ ‘ಜನರ ವಿರುದ್ಧ'” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

“ರೈತ ವಿರೋಧಿ ಕಾಯ್ದೆಗಳ ವಿರುದ್ಧ ರೈತರು ದೆಹಲಿಗೆ ಮೆರವಣಿಗೆ ಮಾಡುವುದನ್ನು ತಡೆಯಲು ಹರಿಯಾಣ, ಯುಪಿ ಮತ್ತು ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರಗಳು ಭಾರಿ ದಬ್ಬಾಳಿಕೆ ನಡೆಸುತ್ತಿದೆ. ನೂರಾರು ಜನರನ್ನು ಬಂಧಿಸಲಾಗಿದೆ. ಇಂತಹ ದಾಳಿಗಳಿಂದ ಪ್ರತಿಭಟನೆಯ ದನಿಗಳನ್ನು ನಿಗ್ರಹಿಸಲು ಸಾಧ್ಯವಿಲ್ಲ” ಕಿಸಾನ್ ಸಭಾ ಹೇಳಿದೆ.

“ಕರಾಳ ಕೃಷಿ ಕಾನೂನುಗಳ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸಲು ದೆಹಲಿಗೆ ಮೆರವಣಿಗೆ ನಡೆಸುತ್ತಿರುವ ನಮ್ಮ ಅನ್ನದಾತರ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ. ಬಿಜೆಪಿ ಸರ್ಕಾರ ರೈತರ ಧ್ವನಿಯನ್ನು ಅವರ ಕ್ರೌರ್ಯ ಮತ್ತು ವಿವೇಚನಾರಹಿತ ಶಕ್ತಿಯಿಂದ ನಿಗ್ರಹಿಸಲು ಸಾಧ್ಯವಿಲ್ಲ.” ಎಂದು ಚತ್ತೀಸ್‌ಗಡ್‌ ಸಚಿವರಾದ ಟಿಎಸ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ:  ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

 

ದನ್ನೂ ಓದಿ:  ಕಿಸಾನ್ ಮುಕ್ತಿ ಮಾರ್ಚ್ ‘ದೆಹಲಿ ಚಲೋ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...