Homeಮುಖಪುಟದೆಹಲಿ ಚಲೋ: ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಣೆ, ಹರಿಯಾಣ ಗಡಿಯಲ್ಲಿ ಮೊಂಬತ್ತಿ ಮೆರವಣಿಗೆ

ದೆಹಲಿ ಚಲೋ: ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಅರ್ಪಣೆ, ಹರಿಯಾಣ ಗಡಿಯಲ್ಲಿ ಮೊಂಬತ್ತಿ ಮೆರವಣಿಗೆ

- Advertisement -
- Advertisement -

ಸಂಗ್ರೂರ್-ಜಿಂದ್ ಗಡಿಯಲ್ಲಿರುವ ಖಾನೌರಿಯಲ್ಲಿ ನಡೆದ ಘರ್ಷಣೆಯಲ್ಲಿ 23 ವರ್ಷದ ರೈತ ಸುಭ್‌ಕರನ್ ಸಿಂಗ್ ಸಾವಿಗೀಡಾದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಹರಿಯಾಣವನ್ನು ಸಂಪರ್ಕಿಸುವ ಖಾನೌರಿ-ಶಂಬು ಗಡಿಗಳಲ್ಲಿ ಶನಿವಾರ ಹಲವಾರು ರೈತ ಸಂಘಗಳು ಕ್ಯಾಂಡಲ್ ಮೆರವಣಿಗೆ ನಡೆಸಿದವು.

ಶಂಭೂ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಶುಭಕರನ್ ಸಿಂಗ್ ಮಾತ್ರವಲ್ಲದೆ ಪ್ರಾಣ ಕಳೆದುಕೊಂಡ ಎಲ್ಲ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸಾವಿರಾರು ರೈತರು ಜಮಾಯಿಸಿದರು. ಖಾನೌರಿ ಗಡಿಯಲ್ಲಿ ನಡೆದ ಕ್ಯಾಂಡಲ್ ಮೆರವಣಿಗೆಯಲ್ಲಿ ಶುಭಕರನ್ ಸಿಂಗ್ ಅವರ ಕುಟುಂಬವೂ ಭಾಗವಹಿಸಿತ್ತು.

ರೈತರ ಪ್ರಕಾರ, ಪ್ರತಿಭಟನಾಕಾರರು ಬುಧವಾರ ತಮ್ಮ ‘ದೆಹಲಿ ಚಲೋ’ ಆಂದೋಲನವನ್ನು ಪುನರಾರಂಭಿಸುತ್ತಿದ್ದಂತೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರೊಂದಿಗೆ ಘರ್ಷಣೆಯ ಸಂದರ್ಭದಲ್ಲಿ ಶುಭಕರನ್ ಸಿಂಗ್ ಸಾವನ್ನಪ್ಪಿದರು.

ಪಂಜಾಬ್‌ನ ಬಟಿಂಡಾದ 23 ವರ್ಷದ ರೈತ ಹರಿಯಾಣ ಪೊಲೀಸರೊಂದಿಗೆ ಘರ್ಷಣೆಯಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರು ನಡೆಸಿದ ಅಶ್ರುವಾಯು ಶೆಲ್‌ನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಕೆಲವು ರೈತರು ಆರೋಪಿಸಿದ್ದಾರೆ. ‘ಇಂದು, ನಾವು ಶುಭಕರನ್ ಸಿಂಗ್ ಮತ್ತು ಆಂದೋಲನದಲ್ಲಿ ಇತರ ಹುತಾತ್ಮರನ್ನು ಸ್ಮರಿಸಲು ಕ್ಯಾಂಡಲ್ ಮೆರವಣಿಗೆಯನ್ನು ಆಯೋಜಿಸಿದ್ದೇವೆ. ನಾಳೆ, ನಾವು ಶಂಭು ಮತ್ತು ಖಾನೌರಿ ಎರಡೂ ಗಡಿಗಳಲ್ಲಿ ಸೆಮಿನಾರ್‌ಗಳನ್ನು ನಡೆಸುತ್ತೇವೆ, ಡಬ್ಲ್ಯುಟಿಒ ರೈತರ ಮೇಲೆ ಹೇಗೆ ಪರಿಣಾಮ ಬೀರುತ್ತಿದೆ ಎಂಬುದರ ಕುರಿತು ರೈತರಲ್ಲಿ ಜಾಗೃತಿ ಮೂಡಿಸುತ್ತೇವೆ’ ಎಂದು ಬಿಕೆಯು ಅಧ್ಯಕ್ಷರಾದ ಅಭಿಮನ್ಯು ಕೊಹಾರ್ಡ್ ನೌಜ್ವಾನ್ ತಿಳಿಸಿದ್ದಾರೆ.

ವಿಶ್ವ ವ್ಯಾಪಾರ ಸಂಸ್ಥೆಯನ್ನು (ಡಬ್ಲ್ಯುಟಿಒ) ಬೇರುಸಹಿತ ಕಿತ್ತುಹಾಕುವ ಮತ್ತು ಜಾಗತಿಕ ವ್ಯಾಪಾರ ಸಂಸ್ಥೆಯಿಂದ ಭಾರತವನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದ ಕೊಹಾರ್ಡ್, ಪ್ರತಿಕೂಲ ಪರಿಣಾಮಗಳ ವಿರುದ್ಧ ತಮ್ಮ ನಿಲುವನ್ನು ವ್ಯಕ್ತಪಡಿಸಿದರು.

‘ಫೆಬ್ರವರಿ 26 ರಂದು ನಾವು ಡಬ್ಲ್ಯುಟಿಒದ ಪ್ರತಿಕೃತಿ ದಹಿಸುತ್ತೇವೆ, ನಂತರ ಎಸ್‌ಕೆಎಂ ರಾಜಕಿಯೇತರ ಮತ್ತು ಇತರ ರೈತ ಸಂಘಗಳು ಸಭೆ ನಡೆಸುತ್ತೇವೆ. ಫೆಬ್ರವರಿ 29ರಂದು ನಾವು ಪ್ರತಿಭಟನೆಯ ಭವಿಷ್ಯದ ನಿರ್ಧಾರಗಳನ್ನು ಪ್ರಕಟಿಸುತ್ತೇವೆ’ ಎಂದು ಅವರು ಹೇಳಿದರು.

ಡಬ್ಲ್ಯುಟಿಒ ಭಾರತೀಯ ರೈತರಿಗೆ ಹೇಗೆ ಸಮಸ್ಯೆಗಳನ್ನು ಉಂಟುಮಾಡುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೊಹಾರ್ಡ್, ‘ಹಿಂದೆ, ಡಬ್ಲ್ಯುಟಿಒ ವ್ಯಾಪಾರ ಮತ್ತು ಸುಂಕದ ಸಾಮಾನ್ಯ ಒಪ್ಪಂದವಾಗಿತ್ತು, ಇದು ಭಾರತದಲ್ಲಿ ಬೆಳೆಯುವ ಒಟ್ಟು ಧಾನ್ಯದ 10% ಅನ್ನು ಮಾತ್ರ ಖರೀದಿಸಬೇಕು ಎಂಬ ನಿಯಮವನ್ನು ನಿಗದಿಪಡಿಸಿತು. ಸರ್ಕಾರದಿಂದ ಎಂಸ್‌ಪಿ ಬೆಲೆಯಲ್ಲಿ ಡಬ್ಲ್ಯೂಟಿಒ ನಿಯಮಗಳು ಅಮೆರಿಕಾದಂತಹ ಪಾಶ್ಚಿಮಾತ್ಯ ಆರ್ಥಿಕತೆಗಳನ್ನು ಬೆಂಬಲಿಸುತ್ತವೆ; ಆದರೆ ಭಾರತದಂತಹ ಅಭಿವೃದ್ಧಿಶೀಲ ಆರ್ಥಿಕತೆಗಳಿಗಲ್ಲ’ ಎಂದರು.

ಶುಭಕರನ್ ಸಿಂಗ್ ಅವರ ಸಹೋದರಿ ಗುರುಪ್ರೀತ್ ಮಾತನಾಡಿ, ‘ನಮಗೆ ಹಣ ಅಥವಾ ಉದ್ಯೋಗದ ದುರಾಸೆಯಿಲ್ಲ; ನಮಗೆ ನ್ಯಾಯ ಮಾತ್ರ ಬೇಕು, ನನ್ನ ಸಹೋದರನ ಹಂತಕರಿಗೆ ಶಿಕ್ಷೆಯಾಗಬೇಕು’ ಎಂದು ಹೇಳಿದರು. ಈ ಮಧ್ಯೆ, ಪಂಜಾಬ್ ಸರ್ಕಾರ ಶುಭಕರನ್ ಸಿಂಗ್ ಅವರ ಸಹೋದರಿಗೆ 1 ಕೋಟಿ ರೂಪಾಯಿ ಪರಿಹಾರ ಮತ್ತು ಉದ್ಯೋಗವನ್ನು ನೀಡಿದೆ.

ಇದನ್ನೂ ಓದಿ; ಸಂವಿಧಾನ ಉಳಿದರೆ ನಾವೆಲ್ಲರೂ ಉಳಿಯುತ್ತೇವೆ; ಇಲ್ಲದಿದ್ದರೆ ಅಪಾಯಕ್ಕೆ ಸಿಲುಕುತ್ತೇವೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...