Homeಕರ್ನಾಟಕದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ನಿನ್ನೆ ರಾತ್ರಿ ಹಾಗೂ ಇಂದು ಬೆಳಿಗ್ಗೆ RSS ನ ಪುಂಡರು ಅಶ್ಲೀಲವಾಗಿ ನಿಂದಿಸಿ ಪ್ರತಿಭಟನಾಕಾರರನ್ನು ಉದ್ರೇಕಗೊಳಿಸಲು ನೋಡಿದ್ದರಾದರೂ ಹೋರಾಟಗಾರರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾನೂನಿನ ವಿರುದ್ದ ರೈತ ಸಂಘಟನೆಗಳು ಹಮ್ಮಿಕೊಂಡಿರುವ ”ದೆಹಲಿ ಚಲೋ’’ಗೆ ತೆರಳುತ್ತಿದ್ದ ಕರ್ನಾಟಕದ ರೈತ ಹೋರಾಟಗಾರನ್ನು ಉತ್ತರ ಪ್ರದೇಶ ಸರ್ಕಾರದ ಪೊಲೀಸರು ರಾಜಸ್ಥಾನದ ಗಡಿಯಲ್ಲಿ ದಿಗ್ಬಂಧನ ವಿಧಿಸಿದ್ದು, ದೆಹಲಿಗೆ ತೆರಳದಂತೆ ತಡೆದು ನಿಲ್ಲಿಸಿದ್ದಾರೆ.

ನಿನ್ನೆ ರಾತ್ರಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮೇಧಾ ಪಾಟ್ಕರ್‌ ನೇತೃತ್ವದ ಜಾಥಾದಲ್ಲಿದ್ದ ಹೋರಾಟಗಾರರನ್ನು ಯುಪಿ ಪೊಲೀಸರು ತಡೆದಿದ್ದರಿಂದ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನದ ಭಾಗದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ರಸ್ತೆಗಳನ್ನು ತಡೆದು ಧರಣಿ ಪ್ರಾರಂಭಿಸಿದ್ದು, ಇದುವರೆಗೂ ಧರಣಿ ಮುಂದುವರೆದಿದೆ. ಧರಣಿಯಲ್ಲಿ ಹೋರಾಟಗಾರ್ತಿಯರಾದ ಮೇಧಾ ಪಾಟ್ಕರ್‌, ಪ್ರತಿಭಾ ಶಿಂದೆ, ಮಧ್ಯಪ್ರದೇಶ ಅಖಿಲ ಭಾರತ ಕಿಸಾನ್ ಸಭಾದ ಜಶ್ವಂತ್‌ ಸಿಂಗ್, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ, ಕರ್ನಾಟಕ ಜನಶಕ್ತಿಯ ಶಿವಕುಮಾರ್ ಸೇರಿದಂತೆ ಹಲವಾರು ಹೋರಾಟಗಾರು ಭಾಗಿಗಳಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

“ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಕಾಯ್ದೆಯ ವಿರುದ್ದ ಇರುವುದರಿಂದ ಇಲ್ಲಿಯ ಪೊಲೀಸರು ನಮ್ಮೊಂದಿಗೆ ನಯವಾಗಿ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಪೊಲೀಸರು ಗಡಿಯಲ್ಲಿ ಕಾಯುತ್ತಿದ್ದು ಗಡಿ ದಾಟುವ ಪ್ರಯತ್ನ ನಡೆಸಿದರೆ ನಮ್ಮ ವಿರುದ್ದ ಕ್ರಮಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದಾರೆ” ಎಂದು ಸ್ಥಳದಲ್ಲೇ ಇರುವ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ ಅವರು ಹೇಳಿದರು.

ನಿನ್ನೆ ರಾತ್ರಿಯಿಂದ ಊಟವಿಲ್ಲದೆ ಇದುವರೆಗೂ ಧರಣಿ ನಡೆಸುತ್ತಿದ್ದೇವೆ ಎಂದು ಹೋರಾಟಗಾರರು ತಿಳಿಸಿದ್ದು, ಮಧ್ಯಪ್ರದೇಶದ ಗ್ವಾಲಿಯಾರ್, ಮೊರಾನ‌, ರಾಜಸ್ಥಾನದ ಡೋಲ್‌ಪುರದಲ್ಲಿ ಸಭೆಗಳನ್ನು ಮುಗಿಸಿ ಯುಪಿ ಮೂಲಕ ದೆಹಲಿಗೆ ತೆರಳ ಬೇಕೆಂದಿದ್ದೆವು ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

“ನಿನ್ನೆ ರಾತ್ರಿ ಕೆಲವು ಆರೆಸ್ಸೆಸ್ ಪುಂಡರು ಪ್ರಯಾಣಿಕರ ಸೋಗಿನಲ್ಲಿ ಬಂದು ಮಹಿಳಾ ಹೋರಾಟಗಾರರನ್ನು ಅಶ್ಲೀಲವಾಗಿ ನಿಂದನೆ ಮಾಡಿ ಉದ್ರೇಕಗೊಳಿಸಲು ನೋಡಿದರಾದರೂ ಹೋರಾಟಗಾರರು ವಿಚಲಿತರಾಗದೆ ಶಾಂತವಾಗಿ ಇದ್ದುದರಿಂದ ಅವರ ಪ್ರಯತ್ನ ವಿಫಲವಾಯಿತು. ಈ ಪ್ರಯತ್ನವನ್ನು ಬೆಳಿಗ್ಗೆ ಕೂಡಾ ಮುಂದುವರೆಸಿದ್ದರು. ಸಧ್ಯ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನ ಭಾಗದಲ್ಲಿ ಧರಣಿ ಕೂತಿದ್ದೇವೆ” ಎಂದು ಯಶವಂತ್‌ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...