Homeಕರ್ನಾಟಕದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ನಿನ್ನೆ ರಾತ್ರಿ ಹಾಗೂ ಇಂದು ಬೆಳಿಗ್ಗೆ RSS ನ ಪುಂಡರು ಅಶ್ಲೀಲವಾಗಿ ನಿಂದಿಸಿ ಪ್ರತಿಭಟನಾಕಾರರನ್ನು ಉದ್ರೇಕಗೊಳಿಸಲು ನೋಡಿದ್ದರಾದರೂ ಹೋರಾಟಗಾರರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾನೂನಿನ ವಿರುದ್ದ ರೈತ ಸಂಘಟನೆಗಳು ಹಮ್ಮಿಕೊಂಡಿರುವ ”ದೆಹಲಿ ಚಲೋ’’ಗೆ ತೆರಳುತ್ತಿದ್ದ ಕರ್ನಾಟಕದ ರೈತ ಹೋರಾಟಗಾರನ್ನು ಉತ್ತರ ಪ್ರದೇಶ ಸರ್ಕಾರದ ಪೊಲೀಸರು ರಾಜಸ್ಥಾನದ ಗಡಿಯಲ್ಲಿ ದಿಗ್ಬಂಧನ ವಿಧಿಸಿದ್ದು, ದೆಹಲಿಗೆ ತೆರಳದಂತೆ ತಡೆದು ನಿಲ್ಲಿಸಿದ್ದಾರೆ.

ನಿನ್ನೆ ರಾತ್ರಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮೇಧಾ ಪಾಟ್ಕರ್‌ ನೇತೃತ್ವದ ಜಾಥಾದಲ್ಲಿದ್ದ ಹೋರಾಟಗಾರರನ್ನು ಯುಪಿ ಪೊಲೀಸರು ತಡೆದಿದ್ದರಿಂದ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನದ ಭಾಗದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ರಸ್ತೆಗಳನ್ನು ತಡೆದು ಧರಣಿ ಪ್ರಾರಂಭಿಸಿದ್ದು, ಇದುವರೆಗೂ ಧರಣಿ ಮುಂದುವರೆದಿದೆ. ಧರಣಿಯಲ್ಲಿ ಹೋರಾಟಗಾರ್ತಿಯರಾದ ಮೇಧಾ ಪಾಟ್ಕರ್‌, ಪ್ರತಿಭಾ ಶಿಂದೆ, ಮಧ್ಯಪ್ರದೇಶ ಅಖಿಲ ಭಾರತ ಕಿಸಾನ್ ಸಭಾದ ಜಶ್ವಂತ್‌ ಸಿಂಗ್, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ, ಕರ್ನಾಟಕ ಜನಶಕ್ತಿಯ ಶಿವಕುಮಾರ್ ಸೇರಿದಂತೆ ಹಲವಾರು ಹೋರಾಟಗಾರು ಭಾಗಿಗಳಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

“ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಕಾಯ್ದೆಯ ವಿರುದ್ದ ಇರುವುದರಿಂದ ಇಲ್ಲಿಯ ಪೊಲೀಸರು ನಮ್ಮೊಂದಿಗೆ ನಯವಾಗಿ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಪೊಲೀಸರು ಗಡಿಯಲ್ಲಿ ಕಾಯುತ್ತಿದ್ದು ಗಡಿ ದಾಟುವ ಪ್ರಯತ್ನ ನಡೆಸಿದರೆ ನಮ್ಮ ವಿರುದ್ದ ಕ್ರಮಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದಾರೆ” ಎಂದು ಸ್ಥಳದಲ್ಲೇ ಇರುವ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ ಅವರು ಹೇಳಿದರು.

ನಿನ್ನೆ ರಾತ್ರಿಯಿಂದ ಊಟವಿಲ್ಲದೆ ಇದುವರೆಗೂ ಧರಣಿ ನಡೆಸುತ್ತಿದ್ದೇವೆ ಎಂದು ಹೋರಾಟಗಾರರು ತಿಳಿಸಿದ್ದು, ಮಧ್ಯಪ್ರದೇಶದ ಗ್ವಾಲಿಯಾರ್, ಮೊರಾನ‌, ರಾಜಸ್ಥಾನದ ಡೋಲ್‌ಪುರದಲ್ಲಿ ಸಭೆಗಳನ್ನು ಮುಗಿಸಿ ಯುಪಿ ಮೂಲಕ ದೆಹಲಿಗೆ ತೆರಳ ಬೇಕೆಂದಿದ್ದೆವು ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

“ನಿನ್ನೆ ರಾತ್ರಿ ಕೆಲವು ಆರೆಸ್ಸೆಸ್ ಪುಂಡರು ಪ್ರಯಾಣಿಕರ ಸೋಗಿನಲ್ಲಿ ಬಂದು ಮಹಿಳಾ ಹೋರಾಟಗಾರರನ್ನು ಅಶ್ಲೀಲವಾಗಿ ನಿಂದನೆ ಮಾಡಿ ಉದ್ರೇಕಗೊಳಿಸಲು ನೋಡಿದರಾದರೂ ಹೋರಾಟಗಾರರು ವಿಚಲಿತರಾಗದೆ ಶಾಂತವಾಗಿ ಇದ್ದುದರಿಂದ ಅವರ ಪ್ರಯತ್ನ ವಿಫಲವಾಯಿತು. ಈ ಪ್ರಯತ್ನವನ್ನು ಬೆಳಿಗ್ಗೆ ಕೂಡಾ ಮುಂದುವರೆಸಿದ್ದರು. ಸಧ್ಯ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನ ಭಾಗದಲ್ಲಿ ಧರಣಿ ಕೂತಿದ್ದೇವೆ” ಎಂದು ಯಶವಂತ್‌ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...