Homeಕರ್ನಾಟಕದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ದೆಹಲಿ ಚಲೋ: ಕರ್ನಾಟಕದ ರೈತ ಹೋರಾಟಗಾರರಿಗೆ ದಿಗ್ಭಂಧನ ವಿಧಿಸಿದ ಯುಪಿ ಸರ್ಕಾರ

ನಿನ್ನೆ ರಾತ್ರಿ ಹಾಗೂ ಇಂದು ಬೆಳಿಗ್ಗೆ RSS ನ ಪುಂಡರು ಅಶ್ಲೀಲವಾಗಿ ನಿಂದಿಸಿ ಪ್ರತಿಭಟನಾಕಾರರನ್ನು ಉದ್ರೇಕಗೊಳಿಸಲು ನೋಡಿದ್ದರಾದರೂ ಹೋರಾಟಗಾರರು ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾನೂನಿನ ವಿರುದ್ದ ರೈತ ಸಂಘಟನೆಗಳು ಹಮ್ಮಿಕೊಂಡಿರುವ ”ದೆಹಲಿ ಚಲೋ’’ಗೆ ತೆರಳುತ್ತಿದ್ದ ಕರ್ನಾಟಕದ ರೈತ ಹೋರಾಟಗಾರನ್ನು ಉತ್ತರ ಪ್ರದೇಶ ಸರ್ಕಾರದ ಪೊಲೀಸರು ರಾಜಸ್ಥಾನದ ಗಡಿಯಲ್ಲಿ ದಿಗ್ಬಂಧನ ವಿಧಿಸಿದ್ದು, ದೆಹಲಿಗೆ ತೆರಳದಂತೆ ತಡೆದು ನಿಲ್ಲಿಸಿದ್ದಾರೆ.

ನಿನ್ನೆ ರಾತ್ರಿ ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಮೇಧಾ ಪಾಟ್ಕರ್‌ ನೇತೃತ್ವದ ಜಾಥಾದಲ್ಲಿದ್ದ ಹೋರಾಟಗಾರರನ್ನು ಯುಪಿ ಪೊಲೀಸರು ತಡೆದಿದ್ದರಿಂದ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನದ ಭಾಗದಲ್ಲಿ ಇಂದು ಬೆಳಿಗ್ಗೆ ಎಂಟು ಗಂಟೆಯಿಂದ ರಸ್ತೆಗಳನ್ನು ತಡೆದು ಧರಣಿ ಪ್ರಾರಂಭಿಸಿದ್ದು, ಇದುವರೆಗೂ ಧರಣಿ ಮುಂದುವರೆದಿದೆ. ಧರಣಿಯಲ್ಲಿ ಹೋರಾಟಗಾರ್ತಿಯರಾದ ಮೇಧಾ ಪಾಟ್ಕರ್‌, ಪ್ರತಿಭಾ ಶಿಂದೆ, ಮಧ್ಯಪ್ರದೇಶ ಅಖಿಲ ಭಾರತ ಕಿಸಾನ್ ಸಭಾದ ಜಶ್ವಂತ್‌ ಸಿಂಗ್, ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ, ಕರ್ನಾಟಕ ಜನಶಕ್ತಿಯ ಶಿವಕುಮಾರ್ ಸೇರಿದಂತೆ ಹಲವಾರು ಹೋರಾಟಗಾರು ಭಾಗಿಗಳಾಗಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರನ್ನು ತಡೆದ ಪೊಲೀಸರು; ಬ್ಯಾರಿಕೇಡ್‌ಗಳನ್ನು ನದಿಗೆಸೆದ ರೈತರು!

“ರಾಜಸ್ಥಾನದ ಕಾಂಗ್ರೆಸ್ ಸರ್ಕಾರವು ಕಾಯ್ದೆಯ ವಿರುದ್ದ ಇರುವುದರಿಂದ ಇಲ್ಲಿಯ ಪೊಲೀಸರು ನಮ್ಮೊಂದಿಗೆ ನಯವಾಗಿ ವರ್ತಿಸುತ್ತಿದ್ದಾರೆ. ಉತ್ತರ ಪ್ರದೇಶದ ಪೊಲೀಸರು ಗಡಿಯಲ್ಲಿ ಕಾಯುತ್ತಿದ್ದು ಗಡಿ ದಾಟುವ ಪ್ರಯತ್ನ ನಡೆಸಿದರೆ ನಮ್ಮ ವಿರುದ್ದ ಕ್ರಮಕ್ಕೆ ಎಲ್ಲಾ ರೀತಿಯ ತಯಾರಿಗಳನ್ನು ನಡೆಸಿದ್ದಾರೆ” ಎಂದು ಸ್ಥಳದಲ್ಲೇ ಇರುವ ಕರ್ನಾಟಕ ಪ್ರಾಂತ ರೈತ ಸಂಘದ ಯಶವಂತ ಅವರು ಹೇಳಿದರು.

ನಿನ್ನೆ ರಾತ್ರಿಯಿಂದ ಊಟವಿಲ್ಲದೆ ಇದುವರೆಗೂ ಧರಣಿ ನಡೆಸುತ್ತಿದ್ದೇವೆ ಎಂದು ಹೋರಾಟಗಾರರು ತಿಳಿಸಿದ್ದು, ಮಧ್ಯಪ್ರದೇಶದ ಗ್ವಾಲಿಯಾರ್, ಮೊರಾನ‌, ರಾಜಸ್ಥಾನದ ಡೋಲ್‌ಪುರದಲ್ಲಿ ಸಭೆಗಳನ್ನು ಮುಗಿಸಿ ಯುಪಿ ಮೂಲಕ ದೆಹಲಿಗೆ ತೆರಳ ಬೇಕೆಂದಿದ್ದೆವು ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ ಚಲೋ: ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವ ಬಿಜೆಪಿ ಸರ್ಕಾರ-ಭಾರಿ ವಿರೋಧ

“ನಿನ್ನೆ ರಾತ್ರಿ ಕೆಲವು ಆರೆಸ್ಸೆಸ್ ಪುಂಡರು ಪ್ರಯಾಣಿಕರ ಸೋಗಿನಲ್ಲಿ ಬಂದು ಮಹಿಳಾ ಹೋರಾಟಗಾರರನ್ನು ಅಶ್ಲೀಲವಾಗಿ ನಿಂದನೆ ಮಾಡಿ ಉದ್ರೇಕಗೊಳಿಸಲು ನೋಡಿದರಾದರೂ ಹೋರಾಟಗಾರರು ವಿಚಲಿತರಾಗದೆ ಶಾಂತವಾಗಿ ಇದ್ದುದರಿಂದ ಅವರ ಪ್ರಯತ್ನ ವಿಫಲವಾಯಿತು. ಈ ಪ್ರಯತ್ನವನ್ನು ಬೆಳಿಗ್ಗೆ ಕೂಡಾ ಮುಂದುವರೆಸಿದ್ದರು. ಸಧ್ಯ ರಾಜಸ್ಥಾನ-ಯುಪಿ ಗಡಿಯ ರಾಜಸ್ಥಾನ ಭಾಗದಲ್ಲಿ ಧರಣಿ ಕೂತಿದ್ದೇವೆ” ಎಂದು ಯಶವಂತ್‌ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...