Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...