Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...