Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...