Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...