Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...