Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...