Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...