Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...