Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...