Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...