Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...