Homeಮುಖಪುಟದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದಿಲ್ಲಿಯಲ್ಲೀಗ ಉಚಿತ ಇಂಟರ್ನೆಟ್‌: ಕೊಟ್ಟ ಭರವಸೆಗಳನ್ನೆಲ್ಲ ಈಡೇರಿಸಿದ್ದೇವೆ ಎಂದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. 

- Advertisement -
- Advertisement -

ಉಚಿತ ವಿದ್ಯುತ್, ನೀರು, ಬಸ್, ಸಿಸಿಟಿವಿ, ಈಗ ಉಚಿತ ವೈಫೈ …. ಹೀಗೆ 2015ರ ವಿಧಾನಸಭಾ ಚುನಾವಣೆಗೆ ಮುನ್ನ ನೀಡಿದ್ದ ಪ್ರಣಾಳಿಕೆಗಳಲ್ಲಿನ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

2015 ರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಣಾಳಿಕೆಯಲ್ಲಿ 70 ಭರವಸೆಗಳನ್ನು ನೀಡಿದ್ದೆವು. ಅಧಿಕಾರಕ್ಕೆ ಬಂದ ನಂತರ ಹಂತ ಹಂತವಾಗಿ ಎಲ್ಲವನ್ನು ಈಡೇರಿಸಿದ್ದೇವೆ ಈಗ ಫ್ರಿ ವೈಫೈ ಕೊಡುವುದು ಕೊನೆಯದಾಗಿದೆ. ಆ ಮೂಲಕ ಪೂರ್ಣ ಉಚಿತ ವೈಫೈ ಪಡೆದ ಜಗತ್ತಿನ ಮೊದಲ ನಗರ ದೆಹಲಿಯಾಗಲಿದೆ ಎಂದು ಕೇಜ್ರಿವಾಲ್‌ ತಿಳಿಸಿದ್ದಾರೆ.

ನಮ್ಮ ದೇಶದಲ್ಲಿ ಸಾಮಾನ್ಯವಾಗಿ ರಾಜಕೀಯ ಪಕ್ಷಗಳು ಯಾವ ಭರವಸೆಗಳನ್ನು ನೀಡಿದ್ದರು ಎಂಬುದನ್ನು ರಾಜಕಾರಣಿಗಳಿರಲಿ ಜನರೇ ಮರೆತುಬಿಡುತ್ತಿದ್ದಾರೆ. ಅದೇ ಸಮಯದಲ್ಲಿ ಆಮ್ ಆದ್ಮಿ ಪಕ್ಷದ ಮುಖಂಡ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತ್ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನೀಡಿದ 70  ಭರವಸೆಗಳನ್ನು ಈಡೇರಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ.

ಈ ಸಮಯದಲ್ಲಿ ಕೇಜ್ರಿವಾಲ್, ತಮ್ಮ ಸರ್ಕಾರವು ತನ್ನ ಪ್ರಣಾಳಿಕೆಯ ಕೊನೆಯ ಚುನಾವಣಾ ಭರವಸೆಯಾದ ದೆಹಲಿಯ ಎಲ್ಲರಿಗೂ ಉಚಿತ ಇಂಟರ್‌ನೆಟ್‌ ನೀಡುವುದು ಸಹ ಈಡೇರಿಸಿದೆ ಮತ್ತು ಅವರ ಎಲ್ಲಾ ಭರವಸೆಗಳನ್ನು ಈಡೇರಿಸಿದ ಮೊದಲ ಸರ್ಕಾರ ತಮ್ಮದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಪತ್ರಿಕಾಗೊಷ್ಟಿಯಲ್ಲಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘ಇಂಟರ್ನೆಟ್ ಇಂದು ಮೂಲಭೂತ ಅಗತ್ಯವಾಗಿದೆ’ ಎಂದು ಹೇಳಿದ್ದಾರೆ.

ಪಾಂಚ್‌ಸಾಲ್‌ ಕೇಜ್ರಿವಾಲ್‌ ಜೊತೆಗೆ ಪಾನಿ ಮಾಫ್‌, ಬಿಜಿಲಿ ಆಫ್‌ ಎಂಬ ಘೋಷಣೆಯನ್ನು ಸಹ ಚುನಾವಣಾ ಪೂರ್ವದಲ್ಲಿ ಆಮ್‌ ಆದ್ಮಿ ಸರ್ಕಾರ ಘೋಷಿಸಿತ್ತು. ಈಗ ಅದರಂತೆ ನಡೆದುಕೊಂಡಿದೆ. ಪಾನಿ ಮಾಫ್‌ ಎಂಬ ಘೋಷಣೆಯಂತೆ ದೆಹಲಿ ಸರ್ಕಾರವು ಪ್ರತಿ ಮನೆಗೆ 20 ಕಿಲೋಲಿಟರ್ (20,000 ಲೀಟರ್) ಉಚಿತ ನೀರನ್ನು ಜಲ ಮಂಡಳಿಯ ಮೀಟರ್ ಮೂಲಕ ಒದಗಿಸುತ್ತಿದೆ.

ಬಿಜಿಲಿ ಆಫ್‌ ವಿಚಾರಕ್ಕೆ ಬಂದರೆ 200 ಯೂನಿಟ್‌ವರೆಗೆ ದೆಹಲಿಯ ಪ್ರತಿಮನೆಗೆ ಉಚಿತ್‌ ವಿದ್ಯುತ್‌ ಒದಗಿಸುತ್ತಿದೆ. 200 ಯೂನಿಟ್‌ ಗೂ ಹೆಚ್ಚು ಬಳಕೆದಾರರಿಗೆ ಮಾತ್ರ ಶುಲ್ಕ ವಿಧಿಸುತ್ತಿದೆ. ಸುಮಾರು 35 ಲಕ್ಷ ಕುಟುಂಬಗಳು ಇದರ ಪ್ರಯೋಜನ ಪಡೆದಿವೆ ಎಂದು ವಿದ್ಯುತ್ ಸರಬರಾಜು ಕಂಪನಿಗಳಾದ ಬಿಎಸ್‌ಇಎಸ್ ಮತ್ತು ಟಾಟಾ ಪವರ್-ಡಿಡಿಎಲ್ ದತ್ತಾಂಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ದೆಹಲಿಯ 14 ಲಕ್ಷ ಮನೆಗಳಿಗೆ ಉಚಿತ ವಿದ್ಯುತ್‌ ಕೊಟ್ಟ ಕೇಜ್ರಿವಾಲ್‌ ಸರ್ಕಾರ!!

ಐದು ವರ್ಷಗಳ ಅವಧಿಯಲ್ಲಿ ದೆಹಲಿಗೆ 5,000 ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಸರ್ಕಾರ ಹೇಳಿತ್ತು. ‌ಆದರೆ ಈ ವಿಷಯವು ಟೆಂಡರ್‌ನಲ್ಲಿ ಸಿಲುಕಿಕೊಳ್ಳುತ್ತಲೇ ಇತ್ತು. ಬಸ್‌ಗಳ ನಿರ್ವಹಣೆಯ ಜವಾಬ್ದಾರಿಯನ್ನು ಕಂಪನಿಗಳು ವಹಿಸಿಕೊಳ್ಳಬೇಕು ಎಂದು ಸರ್ಕಾರ ವಾದಿಸಿತು. ಅದೇ ಸಮಯದಲ್ಲಿ ದೆಹಲಿ ಸರ್ಕಾರವು ಇದರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು ಎಂಬ ಕಂಪನಿಗಳ ಬೇಡಿಕೆ ಇತ್ತು. ಈ ಘರ್ಷಣೆಯಿಂದಾಗಿ ದೆಹಲಿಗೆ ಹೊಸ ಬಸ್‌ಗಳನ್ನು ತರಲು ವಿಳಂಬವಾಯಿತು. ಹಾಗಾಗಿ ಇದುವರೆಗೆ ಸಾವಿರಕ್ಕೂ ಹೆಚ್ಚು ಬಸ್‌ಗಳನ್ನು ತರಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆಗೆ ಜಗನ್‌ ಸರ್ಕಾರ ಒಪ್ಪಿಗೆ

ದೆಹಲಿಯಲ್ಲಿ ಅಪರಾಧಗಳ ತಡೆಗಟ್ಟುವಿಕೆಗಾಗಿ, ಸಾರ್ವಜನಿಕ ಸ್ಥಳಗಳು ಮತ್ತು ಬಸ್‌ಗಳಲ್ಲಿ ಮೊದಲ ಹಂತದಲ್ಲಿ 1,40,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈಗ ಎರಡನೇ ಹಂತದಲ್ಲಿ 140,000 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಯೋಜನೆ ಪ್ರಗತಿಯಲ್ಲಿದೆ.

ದೆಹಲಿಯ ಮೊಹಲ್ಲಾ ಕ್ಲಿನಿಕ್‌ಗಳು ಉಚಿತ ವೈದ್ಯಕೀಯ ಸೇವೆ ನೀಡುವುದರಲ್ಲಿ ಖ್ಯಾತಿ ಗಳಿಸಿವೆ. ಹಾಗೆಯೇ ಸರ್ಕಾರಿ ಶಾಲೆಗಳಿಗೆ ಹೈಟೆಕ್‌ ಸ್ಪರ್ಶ ನೀಡಿದ್ದರಿಂದ ಅವುಗಳು ಮಿಂಚುವುದರ ಜೊತೆಗೆ ಹ್ಯಾಪಿನೆಸ್‌ ಪಠ್ಯಕ್ರಮ ಎಲ್ಲವೂ ದೆಹಲಿ ಸರ್ಕಾರಕ್ಕೆ ಕ್ರೆಡಿಟ್‌ ತಂದುಕೊಟ್ಟಿವೆ. ಇವು ಫಲಿತಾಂಶಗಳಲ್ಲಿಯೂ ಸಕರಾತ್ಮಕ ಬದಲಾವಣೆ ತಂದಿವೆ.

ಈಗ ಉಚಿತ ಇಂಟರ್ನೆಟ್‌ ನೀಡಲು ಕೇಜ್ರಿವಾಲ್ ಸರ್ಕಾರ ಮೊದಲ ಹಂತದಲ್ಲಿ 11 ಸಾವಿರ ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಿದೆ. ಈ ಯೋಜನೆಗೆ 100 ಕೋಟಿ ರೂ ಖರ್ಚಾಗಲಿದ್ದು ಇದರಿಂದಾಗಿ 22 ಲಕ್ಷ ಜನರಿಗೆ ಏಕಕಾಲದಲ್ಲಿ ಇಂಟರ್ನೆಟ್ ಬಳಸಲು ಸಾಧ್ಯವಾಗುತ್ತದೆ.

ಡಿಸೆಂಬರ್ 16 ರಿಂದ ಉಚಿತ ವೈ-ಫೈ ಸೌಲಭ್ಯಗಳು ಲಭ್ಯವಾಗಲಿವೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಆರಂಭದಲ್ಲಿ 100 ವೈ-ಫೈ ಹಾಟ್ ಸ್ಪಾಟ್‌ಗಳನ್ನು ಸ್ಥಾಪಿಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅವುಗಳ  ಸಂಖ್ಯೆ 11 ಸಾವಿರ ತಲುಪಲಿದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...