Homeಮುಖಪುಟಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ 'ಕಿಂಗ್‌ಪಿನ್‌'...

ಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ ‘ಕಿಂಗ್‌ಪಿನ್‌’ ಎಂದು ವಾದಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ದೆಹಲಿ ಅಬಕಾರಿ ನೀತಿಗೆ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾರಿ ನಿರ್ದೇಶನಾಲಯ ಮಾ.28ರವರೆಗೆ ಕಸ್ಟಡಿ ವಿಧಿಸಿದೆ.

ಮಾರ್ಚ್ 28ರಂದು ಮಧ್ಯಾಹ್ನ 2ಗಂಟೆಗೆ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಹೇಳಿದ್ದಾರೆ.

ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ, ಮಂತ್ರಿಗಳು, ಎಎಪಿ ನಾಯಕರು ಶಾಮೀಲಾಗಿರುವ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಕಿಂಗ್‌ ಪಿನ್‌ ಎಂದು ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಹಣ ವರ್ಗಾವಣೆಗೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ವಿಚಾರಣೆಯ ಸಂದರ್ಭದಲ್ಲಿ, ಇಡಿ ಪರ ವಕೀಲರು ಅರವಿಂದ್ ಕೇಜ್ರಿವಾಲ್ ಅವರು ಮಂತ್ರಿಗಳು, ಎಎಪಿ ನಾಯಕರೊಂದಿಗೆ ಶಾಮೀಲಾಗಿ ದೆಹಲಿ ಮದ್ಯ ಹಗರಣವನ್ನು ನಡೆಸಿದ್ದಾರೆ. ಕೇಜ್ರಿವಾಲ್‌ ಪ್ರಕರಣದ ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಅದು ತನ್ನ ರಿಮಾಂಡ್ ಪೇಪರ್‌ನಲ್ಲಿ ಹೇಳಿಕೊಂಡಿದೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆಪಾದಿಸಿದೆ.

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ವಿಚಾರಣಾ ನ್ಯಾಯಾಲಯದಲ್ಲಿ ಕೇಜ್ರಿವಾಲ್‌ರನ್ನು 10 ದಿನಗಳ ಕಸ್ಟಡಿಗೆ ಕೋರಿದ್ದರು. ಕೇಜ್ರಿವಾಲ್ ಅವರು ಸೌತ್ ಗ್ರೂಪ್ ಮತ್ತು ಮದ್ಯ ಹಗರಣದ ಆರೋಪಿಗಳ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೆಹಲಿ ಅಬಕಾರಿ ನೀತಿಯನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಕೇಜ್ರಿವಾಲ್ ಈ ಗುಂಪಿನಿಂದ ಹಲವಾರು ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್‌ ಆಗಿ ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಪಂಜಾಬ್ ಚುನಾವಣೆಗೂ ಮುನ್ನ ಕೇಜ್ರಿವಾಲ್ ಸೌತ್ ಗುಂಪಿನ ಕೆಲವು ಆರೋಪಿಗಳಿಂದ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಇಡಿ ಹೇಳಿಕೊಂಡಿದೆ. ಎಎಪಿ ವ್ಯಕ್ತಿಯಲ್ಲ, ಆದು ಪಕ್ಷವಾಗಿದೆ. ಆದ್ದರಿಂದ  ಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ.

ಅಪರಾಧದ ಆದಾಯ ಕೇವಲ 100 ಕೋಟಿ ರೂ.ಮಾತ್ರವಲ್ಲ 45 ಕೋಟಿ ರೂ.ಗಳ ಹವಾಲಾ ಜಾಡು ಪತ್ತೆಯಾಗಿದೆ, ಈ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು  ರಾಜು ಹೇಳಿದ್ದಾರೆ.

ಎಎಪಿಯ ಮಾಧ್ಯಮ ಉಸ್ತುವಾರಿಯಾಗಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಕೇಜ್ರಿವಾಲ್ ಪರ ಕೆಲಸ ಮಾಡುತ್ತಿದ್ದಾರೆ. ನಾಯರ್ ಅವರು ಕೇಜ್ರಿವಾಲ್ ಅವರ ನಿವಾಸದ ಪಕ್ಕದಲ್ಲಿ ವಾಸಿಸುತ್ತಿದ್ದಾರೆ ಮತ್ತು ಎಎಪಿ ಮತ್ತು ‘ಸೌತ್ ಗ್ರೂಪ್’ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದೆ.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಿಮಾಂಡ್ ಮನವಿಯನ್ನು ವಿರೋಧಿಸಿದರು ಮತ್ತು ಬಂಧನದ ಅಗತ್ಯವನ್ನು ಸಂಸ್ಥೆ ತೋರಿಸಬೇಕಾಗಿದೆ ಎಂದು ಸಲ್ಲಿಸಿದರು. ಬಂಧನಕ್ಕಿರುವ ಶಕ್ತಿ ಮತ್ತು ಬಂಧನದ ಅವಶ್ಯಕತೆ ಎರಡು ವಿಭಿನ್ನ ವಿಷಯಗಳು ಎಂದು ಸಿಂಘ್ವಿ ವಾದಿಸಿದರು. 75 ವರ್ಷಗಳ ಸ್ವಾತಂತ್ರ್ಯದ ಇತಿಹಾಸದಲ್ಲಿ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು, ಪಕ್ಷದ ನಾಲ್ವರು ನಾಯಕರನ್ನು ಬಂಧಿಸಿರುವುದು ಕೂಡ ಇದೇ ಮೊದಲಾಗಿದೆ. ಇದು ಮೊದಲ ಮತ ಚಲಾವಣೆಯಾಗುವ ಮುನ್ನವೇ ಫಲಿತಾಂಶ ಬಂದಂತಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳ ಬಾಕಿ ಇರುವಾಗ ರಾಷ್ಟ್ರ ರಾಜಧಾನಿಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ  ನಡೆದಿತ್ತು. ಮಾ.21ರಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಬಂಧಿಸಿತ್ತು. ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಮನೀಶ್‌ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿತ್ತು.

ಇದನ್ನು ಓದಿ: ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...