Homeಮುಖಪುಟಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ 'ಕಿಂಗ್‌ಪಿನ್‌'...

ಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ ‘ಕಿಂಗ್‌ಪಿನ್‌’ ಎಂದು ವಾದಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ದೆಹಲಿ ಅಬಕಾರಿ ನೀತಿಗೆ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾರಿ ನಿರ್ದೇಶನಾಲಯ ಮಾ.28ರವರೆಗೆ ಕಸ್ಟಡಿ ವಿಧಿಸಿದೆ.

ಮಾರ್ಚ್ 28ರಂದು ಮಧ್ಯಾಹ್ನ 2ಗಂಟೆಗೆ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಹೇಳಿದ್ದಾರೆ.

ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ, ಮಂತ್ರಿಗಳು, ಎಎಪಿ ನಾಯಕರು ಶಾಮೀಲಾಗಿರುವ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಕಿಂಗ್‌ ಪಿನ್‌ ಎಂದು ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಹಣ ವರ್ಗಾವಣೆಗೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ವಿಚಾರಣೆಯ ಸಂದರ್ಭದಲ್ಲಿ, ಇಡಿ ಪರ ವಕೀಲರು ಅರವಿಂದ್ ಕೇಜ್ರಿವಾಲ್ ಅವರು ಮಂತ್ರಿಗಳು, ಎಎಪಿ ನಾಯಕರೊಂದಿಗೆ ಶಾಮೀಲಾಗಿ ದೆಹಲಿ ಮದ್ಯ ಹಗರಣವನ್ನು ನಡೆಸಿದ್ದಾರೆ. ಕೇಜ್ರಿವಾಲ್‌ ಪ್ರಕರಣದ ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಅದು ತನ್ನ ರಿಮಾಂಡ್ ಪೇಪರ್‌ನಲ್ಲಿ ಹೇಳಿಕೊಂಡಿದೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆಪಾದಿಸಿದೆ.

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ವಿಚಾರಣಾ ನ್ಯಾಯಾಲಯದಲ್ಲಿ ಕೇಜ್ರಿವಾಲ್‌ರನ್ನು 10 ದಿನಗಳ ಕಸ್ಟಡಿಗೆ ಕೋರಿದ್ದರು. ಕೇಜ್ರಿವಾಲ್ ಅವರು ಸೌತ್ ಗ್ರೂಪ್ ಮತ್ತು ಮದ್ಯ ಹಗರಣದ ಆರೋಪಿಗಳ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೆಹಲಿ ಅಬಕಾರಿ ನೀತಿಯನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಕೇಜ್ರಿವಾಲ್ ಈ ಗುಂಪಿನಿಂದ ಹಲವಾರು ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್‌ ಆಗಿ ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಪಂಜಾಬ್ ಚುನಾವಣೆಗೂ ಮುನ್ನ ಕೇಜ್ರಿವಾಲ್ ಸೌತ್ ಗುಂಪಿನ ಕೆಲವು ಆರೋಪಿಗಳಿಂದ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಇಡಿ ಹೇಳಿಕೊಂಡಿದೆ. ಎಎಪಿ ವ್ಯಕ್ತಿಯಲ್ಲ, ಆದು ಪಕ್ಷವಾಗಿದೆ. ಆದ್ದರಿಂದ  ಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ.

ಅಪರಾಧದ ಆದಾಯ ಕೇವಲ 100 ಕೋಟಿ ರೂ.ಮಾತ್ರವಲ್ಲ 45 ಕೋಟಿ ರೂ.ಗಳ ಹವಾಲಾ ಜಾಡು ಪತ್ತೆಯಾಗಿದೆ, ಈ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು  ರಾಜು ಹೇಳಿದ್ದಾರೆ.

ಎಎಪಿಯ ಮಾಧ್ಯಮ ಉಸ್ತುವಾರಿಯಾಗಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಕೇಜ್ರಿವಾಲ್ ಪರ ಕೆಲಸ ಮಾಡುತ್ತಿದ್ದಾರೆ. ನಾಯರ್ ಅವರು ಕೇಜ್ರಿವಾಲ್ ಅವರ ನಿವಾಸದ ಪಕ್ಕದಲ್ಲಿ ವಾಸಿಸುತ್ತಿದ್ದಾರೆ ಮತ್ತು ಎಎಪಿ ಮತ್ತು ‘ಸೌತ್ ಗ್ರೂಪ್’ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದೆ.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಿಮಾಂಡ್ ಮನವಿಯನ್ನು ವಿರೋಧಿಸಿದರು ಮತ್ತು ಬಂಧನದ ಅಗತ್ಯವನ್ನು ಸಂಸ್ಥೆ ತೋರಿಸಬೇಕಾಗಿದೆ ಎಂದು ಸಲ್ಲಿಸಿದರು. ಬಂಧನಕ್ಕಿರುವ ಶಕ್ತಿ ಮತ್ತು ಬಂಧನದ ಅವಶ್ಯಕತೆ ಎರಡು ವಿಭಿನ್ನ ವಿಷಯಗಳು ಎಂದು ಸಿಂಘ್ವಿ ವಾದಿಸಿದರು. 75 ವರ್ಷಗಳ ಸ್ವಾತಂತ್ರ್ಯದ ಇತಿಹಾಸದಲ್ಲಿ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು, ಪಕ್ಷದ ನಾಲ್ವರು ನಾಯಕರನ್ನು ಬಂಧಿಸಿರುವುದು ಕೂಡ ಇದೇ ಮೊದಲಾಗಿದೆ. ಇದು ಮೊದಲ ಮತ ಚಲಾವಣೆಯಾಗುವ ಮುನ್ನವೇ ಫಲಿತಾಂಶ ಬಂದಂತಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳ ಬಾಕಿ ಇರುವಾಗ ರಾಷ್ಟ್ರ ರಾಜಧಾನಿಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ  ನಡೆದಿತ್ತು. ಮಾ.21ರಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಬಂಧಿಸಿತ್ತು. ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಮನೀಶ್‌ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿತ್ತು.

ಇದನ್ನು ಓದಿ: ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...