Homeಮುಖಪುಟಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ 'ಕಿಂಗ್‌ಪಿನ್‌'...

ಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ ‘ಕಿಂಗ್‌ಪಿನ್‌’ ಎಂದು ವಾದಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ದೆಹಲಿ ಅಬಕಾರಿ ನೀತಿಗೆ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾರಿ ನಿರ್ದೇಶನಾಲಯ ಮಾ.28ರವರೆಗೆ ಕಸ್ಟಡಿ ವಿಧಿಸಿದೆ.

ಮಾರ್ಚ್ 28ರಂದು ಮಧ್ಯಾಹ್ನ 2ಗಂಟೆಗೆ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಹೇಳಿದ್ದಾರೆ.

ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ, ಮಂತ್ರಿಗಳು, ಎಎಪಿ ನಾಯಕರು ಶಾಮೀಲಾಗಿರುವ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಕಿಂಗ್‌ ಪಿನ್‌ ಎಂದು ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಹಣ ವರ್ಗಾವಣೆಗೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ವಿಚಾರಣೆಯ ಸಂದರ್ಭದಲ್ಲಿ, ಇಡಿ ಪರ ವಕೀಲರು ಅರವಿಂದ್ ಕೇಜ್ರಿವಾಲ್ ಅವರು ಮಂತ್ರಿಗಳು, ಎಎಪಿ ನಾಯಕರೊಂದಿಗೆ ಶಾಮೀಲಾಗಿ ದೆಹಲಿ ಮದ್ಯ ಹಗರಣವನ್ನು ನಡೆಸಿದ್ದಾರೆ. ಕೇಜ್ರಿವಾಲ್‌ ಪ್ರಕರಣದ ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಅದು ತನ್ನ ರಿಮಾಂಡ್ ಪೇಪರ್‌ನಲ್ಲಿ ಹೇಳಿಕೊಂಡಿದೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆಪಾದಿಸಿದೆ.

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ವಿಚಾರಣಾ ನ್ಯಾಯಾಲಯದಲ್ಲಿ ಕೇಜ್ರಿವಾಲ್‌ರನ್ನು 10 ದಿನಗಳ ಕಸ್ಟಡಿಗೆ ಕೋರಿದ್ದರು. ಕೇಜ್ರಿವಾಲ್ ಅವರು ಸೌತ್ ಗ್ರೂಪ್ ಮತ್ತು ಮದ್ಯ ಹಗರಣದ ಆರೋಪಿಗಳ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೆಹಲಿ ಅಬಕಾರಿ ನೀತಿಯನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಕೇಜ್ರಿವಾಲ್ ಈ ಗುಂಪಿನಿಂದ ಹಲವಾರು ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್‌ ಆಗಿ ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಪಂಜಾಬ್ ಚುನಾವಣೆಗೂ ಮುನ್ನ ಕೇಜ್ರಿವಾಲ್ ಸೌತ್ ಗುಂಪಿನ ಕೆಲವು ಆರೋಪಿಗಳಿಂದ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಇಡಿ ಹೇಳಿಕೊಂಡಿದೆ. ಎಎಪಿ ವ್ಯಕ್ತಿಯಲ್ಲ, ಆದು ಪಕ್ಷವಾಗಿದೆ. ಆದ್ದರಿಂದ  ಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ.

ಅಪರಾಧದ ಆದಾಯ ಕೇವಲ 100 ಕೋಟಿ ರೂ.ಮಾತ್ರವಲ್ಲ 45 ಕೋಟಿ ರೂ.ಗಳ ಹವಾಲಾ ಜಾಡು ಪತ್ತೆಯಾಗಿದೆ, ಈ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು  ರಾಜು ಹೇಳಿದ್ದಾರೆ.

ಎಎಪಿಯ ಮಾಧ್ಯಮ ಉಸ್ತುವಾರಿಯಾಗಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಕೇಜ್ರಿವಾಲ್ ಪರ ಕೆಲಸ ಮಾಡುತ್ತಿದ್ದಾರೆ. ನಾಯರ್ ಅವರು ಕೇಜ್ರಿವಾಲ್ ಅವರ ನಿವಾಸದ ಪಕ್ಕದಲ್ಲಿ ವಾಸಿಸುತ್ತಿದ್ದಾರೆ ಮತ್ತು ಎಎಪಿ ಮತ್ತು ‘ಸೌತ್ ಗ್ರೂಪ್’ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದೆ.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಿಮಾಂಡ್ ಮನವಿಯನ್ನು ವಿರೋಧಿಸಿದರು ಮತ್ತು ಬಂಧನದ ಅಗತ್ಯವನ್ನು ಸಂಸ್ಥೆ ತೋರಿಸಬೇಕಾಗಿದೆ ಎಂದು ಸಲ್ಲಿಸಿದರು. ಬಂಧನಕ್ಕಿರುವ ಶಕ್ತಿ ಮತ್ತು ಬಂಧನದ ಅವಶ್ಯಕತೆ ಎರಡು ವಿಭಿನ್ನ ವಿಷಯಗಳು ಎಂದು ಸಿಂಘ್ವಿ ವಾದಿಸಿದರು. 75 ವರ್ಷಗಳ ಸ್ವಾತಂತ್ರ್ಯದ ಇತಿಹಾಸದಲ್ಲಿ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು, ಪಕ್ಷದ ನಾಲ್ವರು ನಾಯಕರನ್ನು ಬಂಧಿಸಿರುವುದು ಕೂಡ ಇದೇ ಮೊದಲಾಗಿದೆ. ಇದು ಮೊದಲ ಮತ ಚಲಾವಣೆಯಾಗುವ ಮುನ್ನವೇ ಫಲಿತಾಂಶ ಬಂದಂತಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳ ಬಾಕಿ ಇರುವಾಗ ರಾಷ್ಟ್ರ ರಾಜಧಾನಿಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ  ನಡೆದಿತ್ತು. ಮಾ.21ರಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಬಂಧಿಸಿತ್ತು. ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಮನೀಶ್‌ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿತ್ತು.

ಇದನ್ನು ಓದಿ: ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...