Homeಮುಖಪುಟದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

- Advertisement -
- Advertisement -

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇತ್ತಿಚೆಗಷ್ಟೆ ಅಧಿಕಾರ ಸ್ವೀಕರಿಸಿದ್ದ ಅತಿಶಿ ಮಾರ್ಲಿನಾ ಅವರ ವಸ್ತುಗಳನ್ನು ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಮುಖ್ಯಮಂತ್ರಿಯ ಸರ್ಕಾರಿ ಬಂಗಲೆಯಿಂದ ಹೊರಹಾಕಲಾಗಿದೆ ಎಂದು ಎಎಪಿ ಬುಧವಾರ ಆರೋಪಿಸಿದೆ. ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ವರದಿಯಾಗಿದೆ. ದೆಹಲಿ ಸಿಎಂ

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಸಂಘರ್ಷ ಪ್ರಾರಂಭವಾಗುವ ಸೂಚನೆಯಿದ್ದು, ದೆಹಲಿ ಮುಖ್ಯಮಂತ್ರಿ ಕಚೇರಿಯು ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅತಿಶಿ ಅವರ ವಸ್ತುಗಳನ್ನು “ಬಿಜೆಪಿಯ ಆಜ್ಞೆಯ ಮೇರೆಗೆ” ಸರ್ಕಾರಿ ಬಂಗಲೆಯಿಂದ “ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಎಎಪಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ದೆಹಲಿ ಮುಖ್ಯಮಂತ್ರಿ ಕಚೇರಿಯ ಆರೋಪಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಚೇರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಬಂಗಲೆಯು ವಿವಾದವು ಎಎಪಿ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಘರ್ಷಣೆಯನ್ನು ಹುಟ್ಟುಹಾಕಿದೆ. ಎರಡೂ ಪಕ್ಷಗಳು ತಮ್ಮ ಪ್ರಕರಣವನ್ನು ಬೆಂಬಲಿಸಲು ದಾಖಲೆಗಳನ್ನು ಮುಂದಿಟ್ಟಿವೆ. ಬಂಗಲೆಯನ್ನು ಬಿಜೆಪಿ ಕಬಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

ಸರ್ಕಾರಿ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ದೃಶ್ಯಗಳು ವೈರಲ್ ಆಗಿವೆ. ನಿವಾಸಕ್ಕೆ ಡಬಲ್ ಬೀಗ ಹಾಕಲಾಗಿದ್ದು, ಕೀಗಳನ್ನು ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅದನ್ನು ಬಂಗಲೆ ಖಾಲಿ ಮಾಡಿದ ಕೆಲವು ದಿನಗಳ ನಂತರ, ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಫ್ಲಾಗ್‌ಸ್ಟಾಫ್ ರಸ್ತೆಯಲ್ಲಿರುವ ಬಂಗಲೆ ಸಂಖ್ಯೆ 6ಕ್ಕೆ ಅತಿಶಿ ಸೋಮವಾರ ಸ್ಥಳಾಂತರಗೊಂಡಿದ್ದರು.

ಆತಿಶಿ ಅವರು ಸ್ಥಳಾಂತರಗೊಂಡ ಕೆಲವು ಗಂಟೆಗಳ ನಂತರ, ಬಂಗಲೆಯನ್ನು ಹೊಸ ಹಂಚಿಕೆಗಾಗಿ ಲೋಕೋಪಯೋಗಿ ಇಲಾಖೆ ಅಥವಾ ಪಿಡಬ್ಲ್ಯುಡಿಗೆ ಇನ್ನಷ್ಟೆ ಹಸ್ತಾಂತರಿಸಬೇಕಾಗಿದೆ ಎಂದು ಬಿಜೆಪಿ ಹೇಳಿಕೊಂಡಿತ್ತು.

ದೆಹಲಿ ಅಬಕಾರಿ ಪ್ರಕರಣದಲ್ಲಿ ಸುಮಾರು 6 ತಿಂಗಳುಗಳ ಕಾಲ ಜೈಲಿನಲ್ಲಿ ಕಳೆದಿದ್ದ ಮಾಜಿ ಮುಖ್ಯಮಂತ್ರಿ ಅರಂವಿದ್ ಕೇಜ್ರಿವಾಲ್ ಅವರು, ಪ್ರಕರಣದಲ್ಲಿ ಜಾಮೀನು ದೊರೆತು ಬಿಡುಗಡೆಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೆ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವೆಯಾಗಿದ್ದ ಆತಿಶಿ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ದೆಹಲಿ ಸಿಎಂ

ವಿಡಿಯೊ ನೋಡಿ: ಪ್ರಬಲ ಜಾತಿ ಸಂಘಗಳಿಗೆ ಹಣ ಹರಿದುಬರುತ್ತೆ, ತಳಸಮುದಾಯಗಳ ಸಂಪನ್ಮೂಲ ಸಂಪೂರ್ಣ ಕಿತ್ತುಕೊಳ್ಳಲಾಗಿದೆ-ಸಿ.ಜಿ. ಲಕ್ಷ್ಮಿಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...