Homeಮುಖಪುಟದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

- Advertisement -
- Advertisement -

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇತ್ತಿಚೆಗಷ್ಟೆ ಅಧಿಕಾರ ಸ್ವೀಕರಿಸಿದ್ದ ಅತಿಶಿ ಮಾರ್ಲಿನಾ ಅವರ ವಸ್ತುಗಳನ್ನು ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಮುಖ್ಯಮಂತ್ರಿಯ ಸರ್ಕಾರಿ ಬಂಗಲೆಯಿಂದ ಹೊರಹಾಕಲಾಗಿದೆ ಎಂದು ಎಎಪಿ ಬುಧವಾರ ಆರೋಪಿಸಿದೆ. ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ವರದಿಯಾಗಿದೆ. ದೆಹಲಿ ಸಿಎಂ

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಸಂಘರ್ಷ ಪ್ರಾರಂಭವಾಗುವ ಸೂಚನೆಯಿದ್ದು, ದೆಹಲಿ ಮುಖ್ಯಮಂತ್ರಿ ಕಚೇರಿಯು ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅತಿಶಿ ಅವರ ವಸ್ತುಗಳನ್ನು “ಬಿಜೆಪಿಯ ಆಜ್ಞೆಯ ಮೇರೆಗೆ” ಸರ್ಕಾರಿ ಬಂಗಲೆಯಿಂದ “ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಎಎಪಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ದೆಹಲಿ ಮುಖ್ಯಮಂತ್ರಿ ಕಚೇರಿಯ ಆರೋಪಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಚೇರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಬಂಗಲೆಯು ವಿವಾದವು ಎಎಪಿ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಘರ್ಷಣೆಯನ್ನು ಹುಟ್ಟುಹಾಕಿದೆ. ಎರಡೂ ಪಕ್ಷಗಳು ತಮ್ಮ ಪ್ರಕರಣವನ್ನು ಬೆಂಬಲಿಸಲು ದಾಖಲೆಗಳನ್ನು ಮುಂದಿಟ್ಟಿವೆ. ಬಂಗಲೆಯನ್ನು ಬಿಜೆಪಿ ಕಬಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

ಸರ್ಕಾರಿ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ದೃಶ್ಯಗಳು ವೈರಲ್ ಆಗಿವೆ. ನಿವಾಸಕ್ಕೆ ಡಬಲ್ ಬೀಗ ಹಾಕಲಾಗಿದ್ದು, ಕೀಗಳನ್ನು ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅದನ್ನು ಬಂಗಲೆ ಖಾಲಿ ಮಾಡಿದ ಕೆಲವು ದಿನಗಳ ನಂತರ, ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಫ್ಲಾಗ್‌ಸ್ಟಾಫ್ ರಸ್ತೆಯಲ್ಲಿರುವ ಬಂಗಲೆ ಸಂಖ್ಯೆ 6ಕ್ಕೆ ಅತಿಶಿ ಸೋಮವಾರ ಸ್ಥಳಾಂತರಗೊಂಡಿದ್ದರು.

ಆತಿಶಿ ಅವರು ಸ್ಥಳಾಂತರಗೊಂಡ ಕೆಲವು ಗಂಟೆಗಳ ನಂತರ, ಬಂಗಲೆಯನ್ನು ಹೊಸ ಹಂಚಿಕೆಗಾಗಿ ಲೋಕೋಪಯೋಗಿ ಇಲಾಖೆ ಅಥವಾ ಪಿಡಬ್ಲ್ಯುಡಿಗೆ ಇನ್ನಷ್ಟೆ ಹಸ್ತಾಂತರಿಸಬೇಕಾಗಿದೆ ಎಂದು ಬಿಜೆಪಿ ಹೇಳಿಕೊಂಡಿತ್ತು.

ದೆಹಲಿ ಅಬಕಾರಿ ಪ್ರಕರಣದಲ್ಲಿ ಸುಮಾರು 6 ತಿಂಗಳುಗಳ ಕಾಲ ಜೈಲಿನಲ್ಲಿ ಕಳೆದಿದ್ದ ಮಾಜಿ ಮುಖ್ಯಮಂತ್ರಿ ಅರಂವಿದ್ ಕೇಜ್ರಿವಾಲ್ ಅವರು, ಪ್ರಕರಣದಲ್ಲಿ ಜಾಮೀನು ದೊರೆತು ಬಿಡುಗಡೆಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೆ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವೆಯಾಗಿದ್ದ ಆತಿಶಿ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ದೆಹಲಿ ಸಿಎಂ

ವಿಡಿಯೊ ನೋಡಿ: ಪ್ರಬಲ ಜಾತಿ ಸಂಘಗಳಿಗೆ ಹಣ ಹರಿದುಬರುತ್ತೆ, ತಳಸಮುದಾಯಗಳ ಸಂಪನ್ಮೂಲ ಸಂಪೂರ್ಣ ಕಿತ್ತುಕೊಳ್ಳಲಾಗಿದೆ-ಸಿ.ಜಿ. ಲಕ್ಷ್ಮಿಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...