Homeಮುಖಪುಟದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

ದೆಹಲಿ ಸಿಎಂ ಅತಿಶಿಯನ್ನು ಸರ್ಕಾರಿ ಬಂಗಲೆಯಿಂದ ಹೊರಹಾಕಿದೆ ಲೆಫ್ಟಿನೆಂಟ್ ಗವರ್ನರ್!

- Advertisement -
- Advertisement -

ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಇತ್ತಿಚೆಗಷ್ಟೆ ಅಧಿಕಾರ ಸ್ವೀಕರಿಸಿದ್ದ ಅತಿಶಿ ಮಾರ್ಲಿನಾ ಅವರ ವಸ್ತುಗಳನ್ನು ಲೆಫ್ಟಿನೆಂಟ್ ಗವರ್ನರ್ ಆದೇಶದ ಮೇರೆಗೆ ಮುಖ್ಯಮಂತ್ರಿಯ ಸರ್ಕಾರಿ ಬಂಗಲೆಯಿಂದ ಹೊರಹಾಕಲಾಗಿದೆ ಎಂದು ಎಎಪಿ ಬುಧವಾರ ಆರೋಪಿಸಿದೆ. ಅತಿಶಿ ಅವರು ತಮ್ಮ ಅಧಿಕೃತ ನಿವಾಸಕ್ಕೆ ತೆರಳಿದ ಎರಡು ದಿನಗಳ ನಂತರ ಅವರನ್ನು ಹೊರಹಾಕಲಾಗಿದೆ ಎಂದು ವರದಿಯಾಗಿದೆ. ದೆಹಲಿ ಸಿಎಂ

ಎಎಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಹೊಸ ಸಂಘರ್ಷ ಪ್ರಾರಂಭವಾಗುವ ಸೂಚನೆಯಿದ್ದು, ದೆಹಲಿ ಮುಖ್ಯಮಂತ್ರಿ ಕಚೇರಿಯು ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಅವರು ಅತಿಶಿ ಅವರ ವಸ್ತುಗಳನ್ನು “ಬಿಜೆಪಿಯ ಆಜ್ಞೆಯ ಮೇರೆಗೆ” ಸರ್ಕಾರಿ ಬಂಗಲೆಯಿಂದ “ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಎಎಪಿ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ದೆಹಲಿ ಮುಖ್ಯಮಂತ್ರಿ ಕಚೇರಿಯ ಆರೋಪಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಚೇರಿ ಇನ್ನೂ ಪ್ರತಿಕ್ರಿಯಿಸಿಲ್ಲ. ಬಂಗಲೆಯು ವಿವಾದವು ಎಎಪಿ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ಘರ್ಷಣೆಯನ್ನು ಹುಟ್ಟುಹಾಕಿದೆ. ಎರಡೂ ಪಕ್ಷಗಳು ತಮ್ಮ ಪ್ರಕರಣವನ್ನು ಬೆಂಬಲಿಸಲು ದಾಖಲೆಗಳನ್ನು ಮುಂದಿಟ್ಟಿವೆ. ಬಂಗಲೆಯನ್ನು ಬಿಜೆಪಿ ಕಬಳಿಸಲು ಪ್ರಯತ್ನಿಸುತ್ತಿದೆ ಎಂದು ಎಎಪಿ ಆರೋಪಿಸಿದೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

ಸರ್ಕಾರಿ ನಿವಾಸದಿಂದ ಹಲವಾರು ಪೆಟ್ಟಿಗೆಗಳು ಮತ್ತು ಸಾಮಾನುಗಳನ್ನು ತೆಗೆದುಕೊಂಡು ಹೋಗುತ್ತಿರುವುದನ್ನು ದೃಶ್ಯಗಳು ವೈರಲ್ ಆಗಿವೆ. ನಿವಾಸಕ್ಕೆ ಡಬಲ್ ಬೀಗ ಹಾಕಲಾಗಿದ್ದು, ಕೀಗಳನ್ನು ಹಸ್ತಾಂತರಿಸುವ ಬಗ್ಗೆ ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯುಡಿ) ಸರಿಯಾದ ದಾಖಲೆಗಳನ್ನು ಸಲ್ಲಿಸಿಲ್ಲ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯಮಂತ್ರಿ ನಿವಾಸವನ್ನು ತೆರವು ಮಾಡಲಾಗಿದೆ. ಬಿಜೆಪಿಯ ಆಜ್ಞೆಯ ಮೇರೆಗೆ ಲೆಫ್ಟಿನೆಂಟ್ ಗವರ್ನರ್ ಮುಖ್ಯಮಂತ್ರಿ ಅತಿಶಿ ಅವರ ವಸ್ತುಗಳನ್ನು ಮುಖ್ಯಮಂತ್ರಿ ನಿವಾಸದಿಂದ ಬಲವಂತವಾಗಿ ತೆಗೆದುಹಾಕಿದ್ದಾರೆ” ಎಂದು ಮುಖ್ಯಮಂತ್ರಿ ಕಚೇರಿ ಆರೋಪಿಸಿದೆ.

ಇದನ್ನೂಓದಿ: ರಾಹುಲ್ ಗಾಂಧಿ ಪೌರತ್ವ ವಿವಾದ: ದಾಖಲೆ ಸಲ್ಲಿಸಲು ಸುಬ್ರಮಣಿಯನ್ ಸ್ವಾಮಿಗೆ ಸಮಯಾವಕಾಶ ನೀಡಿದ ದೆಹಲಿ ಹೈಕೋರ್ಟ್

ದೆಹಲಿಯ ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅದನ್ನು ಬಂಗಲೆ ಖಾಲಿ ಮಾಡಿದ ಕೆಲವು ದಿನಗಳ ನಂತರ, ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಫ್ಲಾಗ್‌ಸ್ಟಾಫ್ ರಸ್ತೆಯಲ್ಲಿರುವ ಬಂಗಲೆ ಸಂಖ್ಯೆ 6ಕ್ಕೆ ಅತಿಶಿ ಸೋಮವಾರ ಸ್ಥಳಾಂತರಗೊಂಡಿದ್ದರು.

ಆತಿಶಿ ಅವರು ಸ್ಥಳಾಂತರಗೊಂಡ ಕೆಲವು ಗಂಟೆಗಳ ನಂತರ, ಬಂಗಲೆಯನ್ನು ಹೊಸ ಹಂಚಿಕೆಗಾಗಿ ಲೋಕೋಪಯೋಗಿ ಇಲಾಖೆ ಅಥವಾ ಪಿಡಬ್ಲ್ಯುಡಿಗೆ ಇನ್ನಷ್ಟೆ ಹಸ್ತಾಂತರಿಸಬೇಕಾಗಿದೆ ಎಂದು ಬಿಜೆಪಿ ಹೇಳಿಕೊಂಡಿತ್ತು.

ದೆಹಲಿ ಅಬಕಾರಿ ಪ್ರಕರಣದಲ್ಲಿ ಸುಮಾರು 6 ತಿಂಗಳುಗಳ ಕಾಲ ಜೈಲಿನಲ್ಲಿ ಕಳೆದಿದ್ದ ಮಾಜಿ ಮುಖ್ಯಮಂತ್ರಿ ಅರಂವಿದ್ ಕೇಜ್ರಿವಾಲ್ ಅವರು, ಪ್ರಕರಣದಲ್ಲಿ ಜಾಮೀನು ದೊರೆತು ಬಿಡುಗಡೆಯಾದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾಗಿ ಕೆಲವೆ ದಿನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಸಚಿವೆಯಾಗಿದ್ದ ಆತಿಶಿ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ದೆಹಲಿ ಸಿಎಂ

ವಿಡಿಯೊ ನೋಡಿ: ಪ್ರಬಲ ಜಾತಿ ಸಂಘಗಳಿಗೆ ಹಣ ಹರಿದುಬರುತ್ತೆ, ತಳಸಮುದಾಯಗಳ ಸಂಪನ್ಮೂಲ ಸಂಪೂರ್ಣ ಕಿತ್ತುಕೊಳ್ಳಲಾಗಿದೆ-ಸಿ.ಜಿ. ಲಕ್ಷ್ಮಿಪತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...