Homeಮುಖಪುಟದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

- Advertisement -
- Advertisement -

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯ ಪ್ರವಾಹದಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹಳೆಯ ರಾಜಿಂದರ್ ನಗರದಲ್ಲಿ ಕನಿಷ್ಠ 13 “ಅಕ್ರಮ” ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿದೆ.

ಶನಿವಾರ ಸಂಜೆ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಸ್ಥಳೀಯ ಆಡಳಿತದ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಸೀಲ್ ಮಾಡಲಾದ ಕೋಚಿಂಗ್ ಸೆಂಟರ್‌ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಅಕಾಡೆಮಗಳು ಸೇರಿವೆ.

“ಈ ಕೋಚಿಂಗ್ ಸೆಂಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ; ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ನೋಟಿಸ್‌ಗಳನ್ನು ಅಂಟಿಸಲಾಗಿದೆ” ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.

ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಅನ್ನು ಈಗಾಗಲೇ ಪೊಲೀಸರು ಸೀಲ್ ಮಾಡಿದ್ದಾರೆ. ಅದರ ಮಾಲೀಕರು ಮತ್ತು ಕೇಂದ್ರದ ಸಂಯೋಜಕರನ್ನು ಬಂಧಿಸಿ ಅಪರಾಧಿ ನರಹತ್ಯೆಯ ಆರೋಪ ಹೊರಿಸಿದ್ದಾರೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಮೃತ ತಾನಿಯಾ ಸೋನಿ, ಶ್ರೇಯಾ ಯಾದವ್ ಇಬ್ಬರೂ 25 ವರ್ಷ ವಯಸ್ಸಿನವರು ಮತ್ತು ನೆವಿನ್ ಡೆಲ್ವಿನ್ 28 ವಯಸ್ಸಿನವರು. ಇನ್ನೂ ಹಲವಾರು ವಿದ್ಯಾರ್ಥಿಗಳು ಜಲಾವೃತಗೊಂಡ ನೆಲಮಾಳಿಗೆಯಲ್ಲಿ ಸಿಲುಕಿಕೊಂಡಿದ್ದರು ಮತ್ತು ಏಳು ಗಂಟೆಗಳ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

ತೆಲಂಗಾಣದಿಂದ ಬಂದಿರುವ ತಾನ್ಯಾ ಅವರು ಬಿಹಾರದ ಔರಂಗಾಬಾದ್‌ನವರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಗಳು ತಿಳಿಸಿವೆ. ದೆಹಲಿ ವಿಶ್ವವಿದ್ಯಾನಿಲಯದ ಮಹಾರಾಜ ಅಗ್ರಸೇನ್ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದ ಅವರು ಒಂದೂವರೆ ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.

ಶ್ರೇಯಾ ಯಾದವ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರು. ಅವರು ಮೊದಲು ಪಶ್ಚಿಮ ದೆಹಲಿಯ ಶಾದಿಪುರ ಪ್ರದೇಶದ ಪಿಜಿ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಕೃಷಿಯಲ್ಲಿ ಬಿಎಸ್ಸಿ ಮಾಡಿದ್ದಳು.

ಕೇರಳದ ಎರ್ನಾಕುಲಂನ ನೆವಿನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕಲೆ ಮತ್ತು ಸೌಂದರ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು. ಎಂಟು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದ ಅವರು ವಸಂತ್ ಕುಂಜ್ ಪ್ರದೇಶದ ವಿಶ್ವವಿದ್ಯಾಲಯದ ಬಳಿ ಬಾಡಿಗೆಗೆ ವಾಸವಾಗಿದ್ದರು.

ಇದುವರೆಗಿನ ತನಿಖೆಗಳು ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ನಾಗರಿಕ ಅಧಿಕಾರಿಗಳ ಕಡೆಯಿಂದ ಅನೇಕ ಲೋಪಗಳನ್ನು ಸೂಚಿಸಿವೆ. ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವು 2021 ರ ಆಗಸ್ಟ್‌ನಲ್ಲಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ನೆಲಮಾಳಿಗೆಯು ಪಾರ್ಕಿಂಗ್ ಬಳಕೆ ಮತ್ತು ಸಂಗ್ರಹಣೆಗಾಗಿ ಎಂದು ಒತ್ತಿಹೇಳುತ್ತದೆ.

ಇದನ್ನೂ ಓದಿ; ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: ಮೃತ ನೆವಿನ್ ಡಾಲ್ವಿನ್ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...