Homeಮುಖಪುಟದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

- Advertisement -
- Advertisement -

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯ ಪ್ರವಾಹದಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹಳೆಯ ರಾಜಿಂದರ್ ನಗರದಲ್ಲಿ ಕನಿಷ್ಠ 13 “ಅಕ್ರಮ” ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿದೆ.

ಶನಿವಾರ ಸಂಜೆ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಸ್ಥಳೀಯ ಆಡಳಿತದ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಸೀಲ್ ಮಾಡಲಾದ ಕೋಚಿಂಗ್ ಸೆಂಟರ್‌ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಅಕಾಡೆಮಗಳು ಸೇರಿವೆ.

“ಈ ಕೋಚಿಂಗ್ ಸೆಂಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ; ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ನೋಟಿಸ್‌ಗಳನ್ನು ಅಂಟಿಸಲಾಗಿದೆ” ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.

ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಅನ್ನು ಈಗಾಗಲೇ ಪೊಲೀಸರು ಸೀಲ್ ಮಾಡಿದ್ದಾರೆ. ಅದರ ಮಾಲೀಕರು ಮತ್ತು ಕೇಂದ್ರದ ಸಂಯೋಜಕರನ್ನು ಬಂಧಿಸಿ ಅಪರಾಧಿ ನರಹತ್ಯೆಯ ಆರೋಪ ಹೊರಿಸಿದ್ದಾರೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಮೃತ ತಾನಿಯಾ ಸೋನಿ, ಶ್ರೇಯಾ ಯಾದವ್ ಇಬ್ಬರೂ 25 ವರ್ಷ ವಯಸ್ಸಿನವರು ಮತ್ತು ನೆವಿನ್ ಡೆಲ್ವಿನ್ 28 ವಯಸ್ಸಿನವರು. ಇನ್ನೂ ಹಲವಾರು ವಿದ್ಯಾರ್ಥಿಗಳು ಜಲಾವೃತಗೊಂಡ ನೆಲಮಾಳಿಗೆಯಲ್ಲಿ ಸಿಲುಕಿಕೊಂಡಿದ್ದರು ಮತ್ತು ಏಳು ಗಂಟೆಗಳ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

ತೆಲಂಗಾಣದಿಂದ ಬಂದಿರುವ ತಾನ್ಯಾ ಅವರು ಬಿಹಾರದ ಔರಂಗಾಬಾದ್‌ನವರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಗಳು ತಿಳಿಸಿವೆ. ದೆಹಲಿ ವಿಶ್ವವಿದ್ಯಾನಿಲಯದ ಮಹಾರಾಜ ಅಗ್ರಸೇನ್ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದ ಅವರು ಒಂದೂವರೆ ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.

ಶ್ರೇಯಾ ಯಾದವ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರು. ಅವರು ಮೊದಲು ಪಶ್ಚಿಮ ದೆಹಲಿಯ ಶಾದಿಪುರ ಪ್ರದೇಶದ ಪಿಜಿ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಕೃಷಿಯಲ್ಲಿ ಬಿಎಸ್ಸಿ ಮಾಡಿದ್ದಳು.

ಕೇರಳದ ಎರ್ನಾಕುಲಂನ ನೆವಿನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕಲೆ ಮತ್ತು ಸೌಂದರ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು. ಎಂಟು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದ ಅವರು ವಸಂತ್ ಕುಂಜ್ ಪ್ರದೇಶದ ವಿಶ್ವವಿದ್ಯಾಲಯದ ಬಳಿ ಬಾಡಿಗೆಗೆ ವಾಸವಾಗಿದ್ದರು.

ಇದುವರೆಗಿನ ತನಿಖೆಗಳು ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ನಾಗರಿಕ ಅಧಿಕಾರಿಗಳ ಕಡೆಯಿಂದ ಅನೇಕ ಲೋಪಗಳನ್ನು ಸೂಚಿಸಿವೆ. ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವು 2021 ರ ಆಗಸ್ಟ್‌ನಲ್ಲಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ನೆಲಮಾಳಿಗೆಯು ಪಾರ್ಕಿಂಗ್ ಬಳಕೆ ಮತ್ತು ಸಂಗ್ರಹಣೆಗಾಗಿ ಎಂದು ಒತ್ತಿಹೇಳುತ್ತದೆ.

ಇದನ್ನೂ ಓದಿ; ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: ಮೃತ ನೆವಿನ್ ಡಾಲ್ವಿನ್ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...