Homeಮುಖಪುಟದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

- Advertisement -
- Advertisement -

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯ ಪ್ರವಾಹದಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹಳೆಯ ರಾಜಿಂದರ್ ನಗರದಲ್ಲಿ ಕನಿಷ್ಠ 13 “ಅಕ್ರಮ” ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿದೆ.

ಶನಿವಾರ ಸಂಜೆ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಸ್ಥಳೀಯ ಆಡಳಿತದ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಸೀಲ್ ಮಾಡಲಾದ ಕೋಚಿಂಗ್ ಸೆಂಟರ್‌ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಅಕಾಡೆಮಗಳು ಸೇರಿವೆ.

“ಈ ಕೋಚಿಂಗ್ ಸೆಂಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ; ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ನೋಟಿಸ್‌ಗಳನ್ನು ಅಂಟಿಸಲಾಗಿದೆ” ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.

ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಅನ್ನು ಈಗಾಗಲೇ ಪೊಲೀಸರು ಸೀಲ್ ಮಾಡಿದ್ದಾರೆ. ಅದರ ಮಾಲೀಕರು ಮತ್ತು ಕೇಂದ್ರದ ಸಂಯೋಜಕರನ್ನು ಬಂಧಿಸಿ ಅಪರಾಧಿ ನರಹತ್ಯೆಯ ಆರೋಪ ಹೊರಿಸಿದ್ದಾರೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಮೃತ ತಾನಿಯಾ ಸೋನಿ, ಶ್ರೇಯಾ ಯಾದವ್ ಇಬ್ಬರೂ 25 ವರ್ಷ ವಯಸ್ಸಿನವರು ಮತ್ತು ನೆವಿನ್ ಡೆಲ್ವಿನ್ 28 ವಯಸ್ಸಿನವರು. ಇನ್ನೂ ಹಲವಾರು ವಿದ್ಯಾರ್ಥಿಗಳು ಜಲಾವೃತಗೊಂಡ ನೆಲಮಾಳಿಗೆಯಲ್ಲಿ ಸಿಲುಕಿಕೊಂಡಿದ್ದರು ಮತ್ತು ಏಳು ಗಂಟೆಗಳ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

ತೆಲಂಗಾಣದಿಂದ ಬಂದಿರುವ ತಾನ್ಯಾ ಅವರು ಬಿಹಾರದ ಔರಂಗಾಬಾದ್‌ನವರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಗಳು ತಿಳಿಸಿವೆ. ದೆಹಲಿ ವಿಶ್ವವಿದ್ಯಾನಿಲಯದ ಮಹಾರಾಜ ಅಗ್ರಸೇನ್ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದ ಅವರು ಒಂದೂವರೆ ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.

ಶ್ರೇಯಾ ಯಾದವ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರು. ಅವರು ಮೊದಲು ಪಶ್ಚಿಮ ದೆಹಲಿಯ ಶಾದಿಪುರ ಪ್ರದೇಶದ ಪಿಜಿ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಕೃಷಿಯಲ್ಲಿ ಬಿಎಸ್ಸಿ ಮಾಡಿದ್ದಳು.

ಕೇರಳದ ಎರ್ನಾಕುಲಂನ ನೆವಿನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕಲೆ ಮತ್ತು ಸೌಂದರ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು. ಎಂಟು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದ ಅವರು ವಸಂತ್ ಕುಂಜ್ ಪ್ರದೇಶದ ವಿಶ್ವವಿದ್ಯಾಲಯದ ಬಳಿ ಬಾಡಿಗೆಗೆ ವಾಸವಾಗಿದ್ದರು.

ಇದುವರೆಗಿನ ತನಿಖೆಗಳು ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ನಾಗರಿಕ ಅಧಿಕಾರಿಗಳ ಕಡೆಯಿಂದ ಅನೇಕ ಲೋಪಗಳನ್ನು ಸೂಚಿಸಿವೆ. ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವು 2021 ರ ಆಗಸ್ಟ್‌ನಲ್ಲಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ನೆಲಮಾಳಿಗೆಯು ಪಾರ್ಕಿಂಗ್ ಬಳಕೆ ಮತ್ತು ಸಂಗ್ರಹಣೆಗಾಗಿ ಎಂದು ಒತ್ತಿಹೇಳುತ್ತದೆ.

ಇದನ್ನೂ ಓದಿ; ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: ಮೃತ ನೆವಿನ್ ಡಾಲ್ವಿನ್ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...