Homeಮುಖಪುಟಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ

ಮದ್ಯ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏ.18ರವರೆಗೆ ವಿಸ್ತರಣೆ

- Advertisement -
- Advertisement -

ಮದ್ಯ ನೀತಿ ಹಗರಣದಲ್ಲಿ ಬಂಧಿತ ಎಎಪಿ ನಾಯಕ ಹಾಗೂ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ.

ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಮನೀಶ್ ಸಿಸೋಡಿಯಾ ಅವರನ್ನು ಇಂದು ಮುಂಜಾನೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಕರೆ ತರಲಾಗಿತ್ತು. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಏಜೆನ್ಸಿಗಳಿಗೆ ಯಾವುದೇ ಹಣ ತನ್ನ ಕೈ ಸೇರಿದೆ ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಏಪ್ರಿಲ್ 2ರಂದು ಆರೋಪಿಸಿದ್ದರು.

2021-22ರ ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿದ್ದಾರೆ.

ಸಿಸೋಡಿಯಾ ಅವರು ಹಿರಿಯ ವಕೀಲ ಮೋಹಿತ್ ಮಾಥುರ್ ಅವರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.  ಸಿಸೋಡಿಯಾ ವಿರುದ್ಧದ ತನಿಖೆ ಮುಕ್ತಾಯವಾಗಿದೆ ಎಂದು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಆದರೆ, ಅವರ ಮೇಲಿನ ಆರೋಪಗಳು ಇನ್ನೂ ದೃಢಪಟ್ಟಿಲ್ಲ. ಹಾಗಾಗಿ ಜಾಮೀನು ಪಡೆಯಲು ಅವರು ಅರ್ಹರಾಗಿದ್ದಾರೆ. ಸಿಸೋಡಿಯಾ ಹನ್ನೊಂದು ತಿಂಗಳಿನಿಂದ ಜೈಲಿನಲ್ಲಿದ್ದಾರೆ, ತನಿಖೆ ಪೂರ್ಣಗೊಂಡಿದೆ. ಆರೋಪಗಳನ್ನು ಸಾಬೀತುಪಡಿಸಬೇಕಿದೆ, ಅವರಿಗೆ ಸಂಬಂಧಪಟ್ಟಂತೆ ಯಾವುದೇ ಆರೋಪ ಸಾಬೀತಾಗಿಲ್ಲ ಎಂದು ಸಿಸೋಡಿಯಾ ಪರವಾಗಿರುವ ವಕೀಲರು ಹೇಳಿದ್ದಾರೆ.

ಸರಕಾರದ ಬೊಕ್ಕಸಕ್ಕೆ ಅಥವಾ ಯಾವುದೇ ವ್ಯಕ್ತಿಗೆ ಯಾವುದೇ ನಷ್ಟವಾಗದ ಕಾರಣ ಸಿಸೋಡಿಯಾ ಜಾಮೀನಿಗೆ ಅರ್ಹರಾಗಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಯಾವುದೇ ನಷ್ಟವಾಗಿಲ್ಲ. ಯಾವುದೇ ವ್ಯಕ್ತಿಗೆ ನಷ್ಟವಿಲ್ಲ. ಗ್ರಾಹಕರಿಗೂ ಯಾರೂ ಮೋಸ ಮಾಡಿಲ್ಲ ಎಂದು ಮಾಥುರ್ ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಮದುವೆಯಲ್ಲಿ ಪಾಲ್ಗೊಳ್ಳಲು ನನಗೆ ಮಧ್ಯಂತರ ಜಾಮೀನು ನೀಡಲಾಯಿತು. ನಾನು ಮದುವೆಯಲ್ಲಿ ಭಾಗವಹಿಸಿ ಹಿಂತಿರುಗಿದ್ದೇನೆ. ನನಗೆ ನೀಡಿದ ಸ್ವಾತಂತ್ರ್ಯವನ್ನು ನಾನು ದುರುಪಯೋಗಪಡಿಸಿಕೊಂಡಿದ್ದೇನೆ ಎಂಬ ಆರೋಪದ ಗುಸುಗುಸು ಕೂಡ ನನ್ನ ವಿರುದ್ಧ ಇರಲಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದಿದ್ದಾರೆ.

ಸಿಸೋಡಿಯಾ ಈ ಹಿಂದೆ ಇಡಿ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು, ಅದನ್ನು ಏಪ್ರಿಲ್ 28, 2023ರಂದು ವಜಾಗೊಳಿಸಲಾಯಿತು. ಸಿಬಿಐ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಮಾರ್ಚ್ 31, 2023ರಂದು ವಜಾಗೊಳಿಸಲಾಯಿತು. ನಂತರ ಅವರು ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ED ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಜುಲೈ 3, 2023ರಂದು ಮತ್ತು ಸಿಬಿಐ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಮೇ 30, 2023ರಂದು ವಜಾಗೊಳಿಸಲಾಯಿತು. ನಂತರ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಇದನ್ನು ಓದಿ: ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...