Homeಮುಖಪುಟ3 ವರ್ಷಗಳ ಅವಧಿಗೆ 'ಸಾಮಾನ್ಯ ಪಾಸ್‌ಪೋರ್ಟ್' ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

3 ವರ್ಷಗಳ ಅವಧಿಗೆ ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

- Advertisement -
- Advertisement -

ಮೂರು ವರ್ಷಗಳ ಅವಧಿಗೆ ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ (ಮೇ 26) ನೀಡಿದೆ.

‘ಮೋದಿ’ ಉಪನಾಮದ ಕುರಿತು ನೀಡಿದ್ದ ಹೇಳಿಕೆ ಸಂಬಂಧ ರಾಹುಲ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ರಾಹುಲ್‌ಗೆ ಶಿಕ್ಷೆಗೆ ಗುರಿಯಾಗಿದ್ದು, ಲೋಕಸಭೆ ಸದಸ್ಯತ್ವದಿಂದಲೂ ಅನರ್ಹಗೊಂಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಅವರು ಸಂಸದರ ಎಲ್ಲ ಸವಲತ್ತುಗಳನ್ನು ಕಳೆದುಕೊಂಡಿದ್ದು, ಇದೇ ವೇಳೆ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ಅನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಹೀಗಾಗಿ, ರಾಹುಲ್ ಗಾಂಧಿ ಅವರು ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು.

ಈ ವೇಳೆ ನ್ಯಾಯಾಧೀಶರು, ”ನಾನು ನಿಮ್ಮ ಅರ್ಜಿಯನ್ನು ಭಾಗಶಃ ಅನುಮತಿಸುತ್ತಿದ್ದೇನೆ. ಆದರೆ 10 ವರ್ಷಗಳಿಗಲ್ಲ, ಮೂರು ವರ್ಷಗಳಿಗೆ ಅನುಮತಿ ನೀಡುತ್ತೇನೆ” ಎಂದು ರಾಹುಲ್ ಗಾಂಧಿಯವರ ವಕೀಲರಿಗೆ ತಿಳಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೂರು ನೀಡಿರುವ ಹಣ ವರ್ಗಾವಣೆ ಮತ್ತು ಹಣ ದುರುಪಯೋಗವನ್ನು ಒಳಗೊಂಡಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಅಗತ್ಯವಿತ್ತು.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೂರುದಾರರಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಗುಜರಾತ್: ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶ ಸೇರಿ 68 ನ್ಯಾಯಾಧೀಶರ ಬಡ್ತಿಗೆ ಸುಪ್ರೀಂ ತಡೆ

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2015ರಲ್ಲಿ ದಾಖಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಹಾಗೂ ಇತರರು ಆರೋಪಿಗಳಾಗಿದ್ದಾರೆ.

ರಾಹುಲ್‌ ಗಾಂಧಿ ಅವರು ನಿರಪೇಕ್ಷಣಾ ಪ್ರಮಾಣಪತ್ರವನ್ನು ಕೋರಿ ಸಲ್ಲಿಸಿದ ಮನವಿಗೆ ಶುಕ್ರವಾರದೊಳಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಬುಧವಾರದಂದು ಸುಬ್ರಮಣಿಯನ್ ಸ್ವಾಮಿಯವರಿಗೆ ತಿಳಿಸಿತ್ತು. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರು ಪ್ರಯಾಣದ ಹಕ್ಕು ಮೂಲಭೂತ ಹಕ್ಕು ಎಂದು ಹೇಳಿದರು. ಅನುಮತಿ ಪಡೆಯದೆ ಹಲವಾರು ಬಾರಿ ಪ್ರಯಾಣಿಸಿದ ಕಾಂಗ್ರೆಸ್ ನಾಯಕನ ಚಲನೆಗೆ ನ್ಯಾಯಾಲಯ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ ಎಂದು ತಿಳಿಸಿದರು. ಡಿಸೆಂಬರ್ 2015ರಲ್ಲಿ ರಾಹುಲ್ ಗಾಂಧಿಗೆ ಜಾಮೀನು ನೀಡುವಾಗ, ನ್ಯಾಯಾಲಯವು ಅವರ ಪ್ರಯಾಣದ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ನಿರ್ಬಂಧಗಳನ್ನು ವಿಧಿಸಲು ಕೋರಿದ್ದ ಸುಬ್ರಮಣಿಯನ್ ಸ್ವಾಮಿಯ ಅವರ ಮನವಿಯನ್ನು ತಿರಸ್ಕರಿಸಲಾಗಿತ್ತು ಎಂದು ಮ್ಯಾಜಿಸ್ಟ್ರೇಟ್ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...