Homeಮುಖಪುಟಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

- Advertisement -
- Advertisement -

ಭಯೋತ್ಪಾದಕರಿಗೆ ಆರ್ಥಿಕ ಸಹಾಯ ಒದಗಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಭಯೋತ್ಪಾದಕರಿಗೆ ಧನ ಸಹಾಯ ಮಾಡಿದ ಆರೋಪದ ಮೇಲೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಶೀದ್ ಅವರನ್ನು 2017 ರಲ್ಲಿ ಬಂಧಿಸಿತ್ತು. ನಂತರ 2019 ರಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ಒದಗಿಸಿದ ಆರೋಪದಲ್ಲಿ ಎನ್‌ಐಎಯಿಂದ ಬಂಧಿಸಲ್ಪಟ್ಟ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರ ವಿಚಾರಣೆ ವೇಳೆ ರಶೀದ್ ಅವರ ಹೆಸರು ಕೇಳಿ ಬಂದಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. 2022ರಲ್ಲಿ ಯಾಸಿನ್ ಮಲಿಕ್‌ಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಮಧ್ಯಂತರ ಜಾಮೀನು ಕೋರಿ ರಶೀದ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಜೈಲಿನಲ್ಲಿದ್ದುಕೊಂಡೇ ಸಂಸದರಾದ ರಶೀದ್ :

ಈ ಬಾರಿಯ ಲೋಕಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ರಶೀದ್ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.

ಕಳೆದ ಜುಲೈ 5ರಂದು ಕೇವಲ ಎರಡು ಗಂಟೆಗಳ ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ರಶೀದ್ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ರಶೀದ್ 2008 ಮತ್ತು 2014ರ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಲ್ಯಾಂಗೇಟ್ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು. ರಶೀದ್ ಅವಾಮಿ ಇತ್ತೆಹಾದ್ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ಚುನಾವಣೆಗಳಿಗೆ ಅವರು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಇದನ್ನೂ ಓದಿ : ವೆಂಟಿಲೇಟರ್‌ನಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ; ಚಿಂತಾಜನಕ ಸ್ಥಿತಿಯಲ್ಲಿ ಹಿರಿಯ ಕಮ್ಯುನಿಸ್ಟ್‌ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...