Homeಮುಖಪುಟಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

- Advertisement -
- Advertisement -

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 9) ನೋಟಿಸ್ ಜಾರಿ ಮಾಡಿದೆ.

ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಹಿರಿಯ ವಕೀಲ ಪವನ್ ನಾರಂಗ್ ಅವರ ವಾದಗಳನ್ನು ಆಲಿಸಿದ ನಂತರ ನೋಟಿಸ್ ಜಾರಿ ಮಾಡಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ನಿಗದಿಪಡಿಸಲಾಗಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರ ಸೆಪ್ಟೆಂಬರ್ 11ರಂದು ನೀಡಿದ ಆದೇಶವನ್ನು ಪ್ರಶ್ನಿಸಿ ಸೆಂಟ್ರಲ್ ದೆಹಲಿ ಕೋರ್ಟ್ ಬಾರ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಹಾಗೂ ವಕೀಲ ವಿಕಾಸ್ ತ್ರಿಪಾಠಿ ಅವರು ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಚೌರಾಸಿಯಾ ಅವರು ಅರ್ಜಿ ವಜಾಗೊಳಿಸುವ ವೇಳೆ, ತಮ್ಮ ನ್ಯಾಯಾಲಯಕ್ಕೆ ಭಾರತೀಯ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಮಾತ್ರ ಮೀಸಲಾಗಿರುವ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲು ಅಧಿಕಾರ ಇಲ್ಲ, ಏಕೆಂದರೆ ನಾಗರಿಕತ್ವವು ಸ್ವತಂತ್ರ ರಾಷ್ಟ್ರ ಮತ್ತು ಅದರ ಪ್ರಜೆಗಳ ನಡುವಿನ ವಿಶೇಷ ಸಂಬಂಧವಾಗಿದೆ ಎಂದಿದ್ದರು.

ಅಲ್ಲದೆ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಾಧೀಶರು, ಇಂತಹ ಕ್ರಮವು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗಿದೆ. ಆಪಾದಿತ ಅಪರಾಧಗಳಾದ ವಂಚನೆ, ನಕಲಿ ಮತ್ತು ಇತರವುಗಳನ್ನು ರೂಪಿಸಲು ಅಗತ್ಯವಾದ ಮೂಲಭೂತ ಅಂಶಗಳು ಸ್ಪಷ್ಟವಾಗಿ ಕೊರತೆಯಿದೆ. ಅರ್ಜಿದಾರರು 1980ರ ಪ್ರಮಾಣೀಕರಿಸದ ಚುನಾವಣಾ ಪಟ್ಟಿಯ ನಕಲು ಪ್ರತಿಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಬಲವಾದ ಆರೋಪಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

ಕಾನೂನುಬದ್ಧ ಆಧಾರವಿಲ್ಲದ ಆರೋಪಗಳನ್ನು ಬಳಸಿ, ನ್ಯಾಯಾಲಯಕ್ಕೆ ಇಲ್ಲದ ಅಧಿಕಾರವನ್ನು ಬಲವಂತವಾಗಿ ಒದಗಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದರು.

ತನ್ನ ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಆದೇಶ ಪ್ರಶ್ನಿಸಿ ವಕೀಲ ತ್ರಿಪಾಠಿ ವಿಶೇಷ ನ್ಯಾಯಾಲಯಕ್ಕೆ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸೋನಿಯಾ ಗಾಂಧಿಯವರ ಹೆಸರು 1980ರಲ್ಲಿ ನವದೆಹಲಿಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ, ಅವರು ಭಾರತದ ನಾಗರಿಕರಾಗಿದ್ದು 1983ರಲ್ಲಿ ಎಂಬುವುದು ವಕೀಲ ತ್ರಿಪಾಠಿಯ ವಾದವಾಗಿದೆ.

ಸೋನಿಯಾ ಗಾಂಧಿ ಸೇರಿದಂತೆ ಪರಿಚಿತ ಮತ್ತು ಅಪರಿಚಿತ ವ್ಯಕ್ತಿಗಳು ಸುಳ್ಳು ದಾಖಲೆ ಪತ್ರಗಳನ್ನು ರಚಿಸುವ ಕಾನೂನುಬಾಹಿರ ಕೃತ್ಯಗಳನ್ನು ಮಾಡಿದ್ದಾರೆ. ಸೋನಿಯಾ ಗಾಂಧಿ ಭಾರತದ ನಾಗರಿಕಲ್ಲದಿದ್ದರೂ, ಅವರ ಹೆಸರನ್ನು ಸಾರ್ವಜನಿಕ ದಾಖಲೆಗಳಲ್ಲಿ ಸೇರಿಸಲಾಗಿತ್ತು. ಇದನ್ನು ಮ್ಯಾಜಿಸ್ಟ್ರೇಟ್ ಗಂಭೀರವಾಗಿ ಗಮನಿಸಿಲ್ಲ ಎಂದು ವಕೀಲ ತ್ರಿಪಾಠಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...