Homeಮುಖಪುಟ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

- Advertisement -
- Advertisement -

ಬಿಜೆಪಿ ನಾಯಕ ಅಮಿತ್ ಮಾಳವಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೆಹಲಿ ಪೊಲೀಸರು ನಡೆಸಿದ ಶೋಧದ ವೇಳೆ ಆನ್‌ಲೈನ್ ಪೋರ್ಟಲ್ “ದಿ ವೈರ್” ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳನ್ನು ಹಿಂತಿರುಗಿಸುವಂತೆ (ಬಿಡುಗಡೆ) ದೆಹಲಿ ನ್ಯಾಯಾಲಯ ನಿನ್ನೆ ಆದೇಶಿಸಿದೆ.

ಪೋರ್ಟಲ್‌ನ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂಕೆ ವೇಣು, ಸಿದ್ಧಾರ್ಥ್ ಭಾಟಿಯಾ, ಉಪ ಸಂಪಾದಕ ಜಾಹ್ನವಿ ಸೇನ್ ಮತ್ತು ಮಿಥುನ್ ಕಿಡಂಬಿ ಅವರಿಂದ ವಶಪಡಿಸಿಕೊಂಡ ಸಾಧನಗಳನ್ನು ಬಿಡುಗಡೆ ಮಾಡದಿರಲು ಯಾವುದೇ ಸಮಂಜಸವಾದ ಕಾರಣವಿಲ್ಲ ಎಂದು ತೀಸ್ ಹಜಾರಿ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ಥ ಮಲಿಕ್ ಹೇಳಿದ್ದಾರೆ ಮತ್ತು 15 ದಿನಗಳಲ್ಲಿ ಸಾಧನಗಳನ್ನು ಬಿಡುಗಡೆ ಮಾಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಸಾಧನಗಳು ಬಹಳ ಸಮಯದಿಂದ ತನಿಖಾಧಿಕಾರಿಯ ವಶದಲ್ಲಿವೆ ಮತ್ತು ಯಾವುದೇ ಮುಂದುವರಿದ  ತನಿಖೆಗೆ ಬೇಕಾದ ದಾಖಲೆ ಎಫ್‌ಎಸ್‌ಎಲ್‌ ಸಂಗ್ರಹಿಸಿದೆ ಎಂದು ನ್ಯಾಯಾಲಯವು ಗಮನಿಸಿದೆ.

ವಶಪಡಿಸಿಕೊಂಡ ಸಾಧನಗಳು ಮುಂದಕ್ಕೆ ತನಿಖೆಗೆ ಅಗತ್ಯವಾಗಬಹುದು ಎಂಬ ಪೊಲೀಸರ ವಾದವನ್ನು ತಳ್ಳಿಹಾಕಿದ ನ್ಯಾಯಾಧೀಶರು  ಸಾಧನಗಳನ್ನು ಅನಿರ್ದಿಷ್ಟವಾಗಿ ವಶಕ್ಕೆ ಅನುಮತಿ ನಿರಾಕರಿಸಿದೆ.

ತನಿಖೆಯ ವೇಳೆ ಪೊಲೀಸರು ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳನ್ನು ಬಿಡುಗಡೆ ಮಾಡುವಂತೆ ಕೋರಿ ಸಂಪಾದಕರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶವನ್ನು ನೀಡಿದ್ದಾರೆ.

ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ (ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು 700ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್ ಮತ್ತು ಅದರ ಸಂಪಾದಕರ ವಿರುದ್ಧ ಅಮಿತ್ ಮಾಳವೀಯ ಎಫ್‌ಐಆರ್ ದಾಖಲಿಸಿದ್ದರು.

ದಿ ವೈರ್ ಮತ್ತು ಸಂಪಾದಕರ ವಿರುದ್ಧ ಸೆಕ್ಷನ್ 420, 468, 469 , 120 ಬಿ ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ: ಕಾಂಗ್ರೆಸ್ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...