Homeಮುಖಪುಟಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೆಂಬರ್ 10 ರಂದು ಆದೇಶಿಸಿತ್ತು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ, ಕೊಳಗಳು ಮತ್ತು ನದಿ ತೀರಗಳಲ್ಲಿ ಛತ್ ಪೂಜಾ ಆಚರಣೆಯನ್ನು ನಿಷೇಧಿಸುವ ಆಪ್ ಸರ್ಕಾರದ ನಿರ್ಧಾರಕ್ಕೆ ಮಧ್ಯ ಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ.

ರಾಷ್ಟ್ರದ ರಾಜಧಾನಿಯಲ್ಲಿ ಈಗಾಗಲೇ ಕೊರೊನಾ ಸೋಂಕಿನ ಮೂರನೇ ಅಲೆ ವ್ಯಾಪಿಸುತ್ತಿದ್ದು, ದೊಡ್ಡ ಸಭೆ, ಸಂಭ್ರಮಾಚರಣೆಗಳಿಗೆ ಅವಕಾಶ ನೀಡುವುದರಿಂದ ಜನರು “ಸೂಪರ್ ಸ್ಪ್ರೆಡರ್ಸ್” ಆಗುತ್ತಾರೆ ಎಂದು ಹೈಕೋರ್ಟ್ ಹೇಳಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಅಧ್ಯಕ್ಷರು ನವೆಂಬರ್ 10 ರಂದು, ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ದುರ್ಗಾ ಜನ್ ಸೇವಾ ಟ್ರಸ್ಟ್ ಸಲ್ಲಿಸಿದ್ದಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮಣಿಯಂ ಪ್ರಸಾದ್ ಅವರ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಛತ್ ಪೂಜೆಗೆ 1,000 ಜನರ ಸಭೆ ನಡೆಸಲು ದುರ್ಗಾ ಜನ್ ಸೇವಾ ಟ್ರಸ್ಟ್ ಅನುಮತಿ ಕೋರಿತು. ಇದಕ್ಕೆ ನ್ಯಾಯಪೀಠ, “ಮದುವೆಗಳಲ್ಲಿ ಪಾಲ್ಗೊಳ್ಳುವ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ಇಂದು ದೆಹಲಿ ಸರ್ಕಾರವು ಆದೇಶ ಹೊರಡಿಸಿರುವಾಗ, ನಿಮಗೆ ಛತ್ ಪೂಜೆಗೆ ಬೇಕಾಗಿರುವುದು 1,000 ವ್ಯಕ್ತಿಗಳು ಮಾತ್ರ. ಹೇಗೆ ಬರುತ್ತಾರೆ?” ಎಂದು ವ್ಯಂಗ್ಯವಾಡಿದೆ.

ದೆಹಲಿಯಲ್ಲಿ ಸೋಂಕು ಹರಡುತ್ತಿರುವುದನ್ನು ಪರಿಗಣಿಸಿ ಅಧಿಕಾರಿಗಳು ಈ ಆದೇಶವನ್ನು ಅಂಗೀಕರಿಸಿದ್ದಾರೆ ಹಾಗಾಗಿ ಅರ್ಜಿಯು ಅರ್ಹವಲ್ಲ ಎಂದು ನ್ಯಾಯಪೀಠ ಹೇಳಿದೆ.

ದೆಹಲಿಯಲ್ಲಿ ಸೋಂಕಿನ ಪ್ರಮಾಣವು ಪ್ರತಿದಿನ 7,800 ರಿಂದ 8,593 ರ ನಡುವೆ ಸುಳಿದಾಡುತ್ತಿದೆ. ಸಾವಿನ ಪ್ರಮಾಣವು ಎರಡು ಅಂಕಿ ಅಂಶಗಳಲ್ಲಿದೆ. 42,000 ಸಕ್ರಿಯ ಪ್ರಕರಣಗಳಿವೆ. ಅರ್ಜಿದಾರರು ನಗರದ ಪ್ರಸ್ತುತ ಪರಿಸ್ಥಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿತ್ತು. ಇಂತಹ ಸನ್ನಿವೆಶದಲ್ಲಿ ಅರ್ಜಿ ಅರ್ಹವಲ್ಲ” ಎಂದು ಹೈಕೋರ್ಟ್‌ ತಿಳಿಸಿದೆ.

‌ಛತ್ ಪೂಜೆಯನ್ನು ರಾಜಧಾನಿಯಲ್ಲಿ ಸಾವಿರಾರು ಮಂದಿ ಆಚರಿಸುತ್ತಾರೆ, ವಿಶೇಷವಾಗಿ ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಿಂದ ರಾಜಧಾನಿಗೆ ವಲಸೆ ಬಂದಿರುವ ಜನರು ಈ ಆಚರಣೆಯಲ್ಲಿ ತೊಡಗುತ್ತಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....