Homeಮುಖಪುಟಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೆಂಬರ್ 10 ರಂದು ಆದೇಶಿಸಿತ್ತು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ, ಕೊಳಗಳು ಮತ್ತು ನದಿ ತೀರಗಳಲ್ಲಿ ಛತ್ ಪೂಜಾ ಆಚರಣೆಯನ್ನು ನಿಷೇಧಿಸುವ ಆಪ್ ಸರ್ಕಾರದ ನಿರ್ಧಾರಕ್ಕೆ ಮಧ್ಯ ಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ.

ರಾಷ್ಟ್ರದ ರಾಜಧಾನಿಯಲ್ಲಿ ಈಗಾಗಲೇ ಕೊರೊನಾ ಸೋಂಕಿನ ಮೂರನೇ ಅಲೆ ವ್ಯಾಪಿಸುತ್ತಿದ್ದು, ದೊಡ್ಡ ಸಭೆ, ಸಂಭ್ರಮಾಚರಣೆಗಳಿಗೆ ಅವಕಾಶ ನೀಡುವುದರಿಂದ ಜನರು “ಸೂಪರ್ ಸ್ಪ್ರೆಡರ್ಸ್” ಆಗುತ್ತಾರೆ ಎಂದು ಹೈಕೋರ್ಟ್ ಹೇಳಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಅಧ್ಯಕ್ಷರು ನವೆಂಬರ್ 10 ರಂದು, ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ದುರ್ಗಾ ಜನ್ ಸೇವಾ ಟ್ರಸ್ಟ್ ಸಲ್ಲಿಸಿದ್ದಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮಣಿಯಂ ಪ್ರಸಾದ್ ಅವರ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಛತ್ ಪೂಜೆಗೆ 1,000 ಜನರ ಸಭೆ ನಡೆಸಲು ದುರ್ಗಾ ಜನ್ ಸೇವಾ ಟ್ರಸ್ಟ್ ಅನುಮತಿ ಕೋರಿತು. ಇದಕ್ಕೆ ನ್ಯಾಯಪೀಠ, “ಮದುವೆಗಳಲ್ಲಿ ಪಾಲ್ಗೊಳ್ಳುವ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ಇಂದು ದೆಹಲಿ ಸರ್ಕಾರವು ಆದೇಶ ಹೊರಡಿಸಿರುವಾಗ, ನಿಮಗೆ ಛತ್ ಪೂಜೆಗೆ ಬೇಕಾಗಿರುವುದು 1,000 ವ್ಯಕ್ತಿಗಳು ಮಾತ್ರ. ಹೇಗೆ ಬರುತ್ತಾರೆ?” ಎಂದು ವ್ಯಂಗ್ಯವಾಡಿದೆ.

ದೆಹಲಿಯಲ್ಲಿ ಸೋಂಕು ಹರಡುತ್ತಿರುವುದನ್ನು ಪರಿಗಣಿಸಿ ಅಧಿಕಾರಿಗಳು ಈ ಆದೇಶವನ್ನು ಅಂಗೀಕರಿಸಿದ್ದಾರೆ ಹಾಗಾಗಿ ಅರ್ಜಿಯು ಅರ್ಹವಲ್ಲ ಎಂದು ನ್ಯಾಯಪೀಠ ಹೇಳಿದೆ.

ದೆಹಲಿಯಲ್ಲಿ ಸೋಂಕಿನ ಪ್ರಮಾಣವು ಪ್ರತಿದಿನ 7,800 ರಿಂದ 8,593 ರ ನಡುವೆ ಸುಳಿದಾಡುತ್ತಿದೆ. ಸಾವಿನ ಪ್ರಮಾಣವು ಎರಡು ಅಂಕಿ ಅಂಶಗಳಲ್ಲಿದೆ. 42,000 ಸಕ್ರಿಯ ಪ್ರಕರಣಗಳಿವೆ. ಅರ್ಜಿದಾರರು ನಗರದ ಪ್ರಸ್ತುತ ಪರಿಸ್ಥಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿತ್ತು. ಇಂತಹ ಸನ್ನಿವೆಶದಲ್ಲಿ ಅರ್ಜಿ ಅರ್ಹವಲ್ಲ” ಎಂದು ಹೈಕೋರ್ಟ್‌ ತಿಳಿಸಿದೆ.

‌ಛತ್ ಪೂಜೆಯನ್ನು ರಾಜಧಾನಿಯಲ್ಲಿ ಸಾವಿರಾರು ಮಂದಿ ಆಚರಿಸುತ್ತಾರೆ, ವಿಶೇಷವಾಗಿ ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಿಂದ ರಾಜಧಾನಿಗೆ ವಲಸೆ ಬಂದಿರುವ ಜನರು ಈ ಆಚರಣೆಯಲ್ಲಿ ತೊಡಗುತ್ತಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...