Homeಮುಖಪುಟಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ಛತ್ ಪೂಜೆಗೆ ದೆಹಲಿ ಸರ್ಕಾರ ನಿರ್ಬಂಧ, ಹಸ್ತಕ್ಷೇಪ ಮಾಡಲ್ಲ ಎಂದ ಹೈಕೋರ್ಟ್

ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೆಂಬರ್ 10 ರಂದು ಆದೇಶಿಸಿತ್ತು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ದೆಹಲಿಯ ಸಾರ್ವಜನಿಕ ಸ್ಥಳಗಳಲ್ಲಿ, ಕೊಳಗಳು ಮತ್ತು ನದಿ ತೀರಗಳಲ್ಲಿ ಛತ್ ಪೂಜಾ ಆಚರಣೆಯನ್ನು ನಿಷೇಧಿಸುವ ಆಪ್ ಸರ್ಕಾರದ ನಿರ್ಧಾರಕ್ಕೆ ಮಧ್ಯ ಪ್ರವೇಶಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿ, ಅರ್ಜಿ ವಜಾಗೊಳಿಸಿದೆ.

ರಾಷ್ಟ್ರದ ರಾಜಧಾನಿಯಲ್ಲಿ ಈಗಾಗಲೇ ಕೊರೊನಾ ಸೋಂಕಿನ ಮೂರನೇ ಅಲೆ ವ್ಯಾಪಿಸುತ್ತಿದ್ದು, ದೊಡ್ಡ ಸಭೆ, ಸಂಭ್ರಮಾಚರಣೆಗಳಿಗೆ ಅವಕಾಶ ನೀಡುವುದರಿಂದ ಜನರು “ಸೂಪರ್ ಸ್ಪ್ರೆಡರ್ಸ್” ಆಗುತ್ತಾರೆ ಎಂದು ಹೈಕೋರ್ಟ್ ಹೇಳಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಅಧ್ಯಕ್ಷರು ನವೆಂಬರ್ 10 ರಂದು, ನ. 20ರಂದು ಸಾರ್ವಜನಿಕ ಸ್ಥಳಗಳಲ್ಲಿ ಛತ್‌ ಪೂಜೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶಿಸಿದ್ದರು. ಇದನ್ನು ಪ್ರಶ್ನಿಸಿ ದುರ್ಗಾ ಜನ್ ಸೇವಾ ಟ್ರಸ್ಟ್ ಸಲ್ಲಿಸಿದ್ದಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಸುಬ್ರಮಣಿಯಂ ಪ್ರಸಾದ್ ಅವರ ನ್ಯಾಯಪೀಠ ಅರ್ಜಿ ವಜಾಗೊಳಿಸಿತು.

ಇದನ್ನೂ ಓದಿ: ಬಿಬಿಎಂಪಿ ಗೆದ್ದರೆ ದೆಹಲಿ ಮಾದರಿಯ ’ಮೊಹಲ್ಲಾ ಕ್ಲಿನಿಕ್’ ಆರಂಭ: ಆಮ್ ಆದ್ಮಿ ಪಕ್ಷ

ಛತ್ ಪೂಜೆಗೆ 1,000 ಜನರ ಸಭೆ ನಡೆಸಲು ದುರ್ಗಾ ಜನ್ ಸೇವಾ ಟ್ರಸ್ಟ್ ಅನುಮತಿ ಕೋರಿತು. ಇದಕ್ಕೆ ನ್ಯಾಯಪೀಠ, “ಮದುವೆಗಳಲ್ಲಿ ಪಾಲ್ಗೊಳ್ಳುವ ಅತಿಥಿಗಳ ಸಂಖ್ಯೆಯನ್ನು 50ಕ್ಕೆ ಸೀಮಿತಗೊಳಿಸಿ ಇಂದು ದೆಹಲಿ ಸರ್ಕಾರವು ಆದೇಶ ಹೊರಡಿಸಿರುವಾಗ, ನಿಮಗೆ ಛತ್ ಪೂಜೆಗೆ ಬೇಕಾಗಿರುವುದು 1,000 ವ್ಯಕ್ತಿಗಳು ಮಾತ್ರ. ಹೇಗೆ ಬರುತ್ತಾರೆ?” ಎಂದು ವ್ಯಂಗ್ಯವಾಡಿದೆ.

ದೆಹಲಿಯಲ್ಲಿ ಸೋಂಕು ಹರಡುತ್ತಿರುವುದನ್ನು ಪರಿಗಣಿಸಿ ಅಧಿಕಾರಿಗಳು ಈ ಆದೇಶವನ್ನು ಅಂಗೀಕರಿಸಿದ್ದಾರೆ ಹಾಗಾಗಿ ಅರ್ಜಿಯು ಅರ್ಹವಲ್ಲ ಎಂದು ನ್ಯಾಯಪೀಠ ಹೇಳಿದೆ.

ದೆಹಲಿಯಲ್ಲಿ ಸೋಂಕಿನ ಪ್ರಮಾಣವು ಪ್ರತಿದಿನ 7,800 ರಿಂದ 8,593 ರ ನಡುವೆ ಸುಳಿದಾಡುತ್ತಿದೆ. ಸಾವಿನ ಪ್ರಮಾಣವು ಎರಡು ಅಂಕಿ ಅಂಶಗಳಲ್ಲಿದೆ. 42,000 ಸಕ್ರಿಯ ಪ್ರಕರಣಗಳಿವೆ. ಅರ್ಜಿದಾರರು ನಗರದ ಪ್ರಸ್ತುತ ಪರಿಸ್ಥಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕಾಗಿತ್ತು. ಇಂತಹ ಸನ್ನಿವೆಶದಲ್ಲಿ ಅರ್ಜಿ ಅರ್ಹವಲ್ಲ” ಎಂದು ಹೈಕೋರ್ಟ್‌ ತಿಳಿಸಿದೆ.

‌ಛತ್ ಪೂಜೆಯನ್ನು ರಾಜಧಾನಿಯಲ್ಲಿ ಸಾವಿರಾರು ಮಂದಿ ಆಚರಿಸುತ್ತಾರೆ, ವಿಶೇಷವಾಗಿ ಬಿಹಾರ ಮತ್ತು ಪೂರ್ವ ಉತ್ತರ ಪ್ರದೇಶದಿಂದ ರಾಜಧಾನಿಗೆ ವಲಸೆ ಬಂದಿರುವ ಜನರು ಈ ಆಚರಣೆಯಲ್ಲಿ ತೊಡಗುತ್ತಾರೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ 3ನೇ ಅಲೆ ವ್ಯಾಪಕವಾಗಿದೆ- ಸತ್ಯೇಂದರ್‌ ಜೈನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...