Homeಮುಖಪುಟಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ...

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

- Advertisement -
- Advertisement -

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನಿರಾಕರಿಸಿದೆ.

ಥೈಲ್ಯಾಂಡ್‌ನಿಂದ ದೆಹಲಿಗೆ ಹಿಂದಿರುಗಿದ ನಂತರ, ತಕ್ಷಣದ ಬಂಧನದಿಂದ ರಕ್ಷಣೆ ಕೋರಿ ಸಹೋದರರು ಬುಧವಾರ ನಾಲ್ಕು ವಾರಗಳ ಟ್ರಾನ್ಸಿಟ್ (ಸಾರಿಗೆ) ನಿರೀಕ್ಷಣಾ ಜಾಮೀನು ಕೋರಿದರು. ಭಾರತೀಯ ಕಾನೂನು ಜಾರಿ ಸಂಸ್ಥೆಗಳ ಕೋರಿಕೆಯ ಮೇರೆಗೆ ಗುರುವಾರ ಮುಂಜಾನೆ ಥಾಯ್ ಪೊಲೀಸರು ಸಹೋದರರನ್ನು ಬಂಧಿಸಿದ್ದು, ಅಧಿಕಾರಿಗಳ ಪ್ರಕಾರ, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಯೂ ಆರಂಭವಾಗಿದೆ.

ಟ್ರಾನ್ಸಿಟ್ ಜಾಮೀನು ಅರ್ಹತೆಯ ಆಧಾರದ ಮೇಲೆ ಆಗುವ ನಿರ್ಧಾರವಲ್ಲ, ಬದಲಿಗೆ ಸರಿಯಾದ ಸಮಯಕ್ಕೆ ನ್ಯಾಯಾಲಯ ಸುರಕ್ಷಿತ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಇರುವ ಸೀಮಿತ ರಕ್ಷಣೆಯ ಭಾಗ ಎಂದು ವಕೀಲರು ಹೇಳಿದ್ದಾರೆ.

ಈ ವೇಳೆ ವಿದೇಶದಲ್ಲಿರುವ ಆರೋಪಿಯೊಬ್ಬನ ವಿರುದ್ಧ ಬ್ಲೂ ಮತ್ತು ರೆಡ್ ಕಾರ್ನರ್ ನೋಟಿಸ್‌ಗಳನ್ನು ಜಾರಿಗೊಳಿಸಲು ಯೋಜಿಸಲಾಗಿದ್ದಲ್ಲಿ, ತಾತ್ಕಾಲಿಕ ರಕ್ಷಣೆಯೊಂದಿಗೆ ಭಾರತಕ್ಕೆ ಮರಳಲು ಅನುಮತಿ ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ಅವರು ಉಲ್ಲೇಖಿಸಿದ್ದಾರೆ.

ಟ್ರಾನ್ಸಿಟ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ “ನ್ಯಾಯಾಲಯವನ್ನು ಸುರಕ್ಷಿತವಾಗಿ ತಲುಪಲು ನಾನು ಕೆಲವು ದಿನಗಳವರೆಗೆ ಮಾತ್ರ ರಕ್ಷಣೆ ಬಯಸುತ್ತೇನೆ. ಒಬ್ಬ ನಾಗರಿಕನು ಕಾನೂನಿಗೆ ವಿಧೇಯನಾಗಲು ಸಿದ್ಧನಿರುವಾಗ, ನ್ಯಾಯಾಲಯವು ಸಹಾಯ ಹಸ್ತ ಚಾಚಬೇಕು, ಮುಷ್ಟಿಯಲ್ಲ” ಎಂದು ಗೌರವ್ ಲೂಥ್ರಾಸ್ ಹೇಳಿದ್ದಾರೆ. 

ಈ ಅರ್ಜಿಯನ್ನು ವಿರೋಧಿಸಿರುವ ಗೋವಾ ರಾಜ್ಯದ ವಕೀಲರು, ಬೆಂಕಿ ಅವಘಡದ ನಂತರ ಲೂಥ್ರಾ ಸಹೋದರರು ಗೋವಾವನ್ನು ತೊರೆದು “ಕಾನೂನು ಪ್ರಕ್ರಿಯೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ” ಎಂದು ವಾದಿಸಿದ್ದಾರೆ. ಸಮನ್ಸ್ ಅಥವಾ ವಾರಂಟ್‌ ಸಲ್ಲಿಸಲು ನಿರಾಕರಿಸುವವರಿಗೆ ಕಾನೂನು ಸಹಾಯ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. 

ನ್ಯಾಯಾಂಗದ ಅವಲೋಕನಗಳನ್ನು ಉಲ್ಲೇಖಿಸಿ, ವಕೀಲರು, “ಒಬ್ಬ ವ್ಯಕ್ತಿಯು ಕಾನೂನು ಪ್ರಕ್ರಿಯೆಯನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾನೆಂದು ತಿಳಿದ ನಂತರ, ನ್ಯಾಯಾಲಯವು ಅವನ ಸಹಾಯಕ್ಕೆ ಬರಬಾರದು” ಎಂದು ಹೇಳಿದ್ದಾರೆ. 

ನಿರೀಕ್ಷಣಾ ಜಾಮೀನು ವಿವೇಚನೆಯಿಂದ ನೀಡಲಾಗುವ ಪರಿಹಾರವಾಗಿದ್ದು, “ವಾರಂಟ್‌ಗಳ ಕಾರ್ಯಗತಗೊಳಿಸುವಿಕೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸಿದ ಅಥವಾ ತಲೆಮರಿಸಿಕೊಂಡವರಿಗೆ ಇದನ್ನು ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...