Homeಮುಖಪುಟಅದಾನಿ ಬಗ್ಗೆ 'ಮಾನಹಾನಿಕರ' ವರದಿಗಳನ್ನು ಪ್ರಕಟಿಸದಂತೆ ಪತ್ರಕರ್ತರು, ವೆಬ್‌ಸೈಟ್‌ಗಳಿಗೆ ನಿರ್ಬಂಧ ವಿಧಿಸಿದ ದೆಹಲಿ ನ್ಯಾಯಾಲಯ

ಅದಾನಿ ಬಗ್ಗೆ ‘ಮಾನಹಾನಿಕರ’ ವರದಿಗಳನ್ನು ಪ್ರಕಟಿಸದಂತೆ ಪತ್ರಕರ್ತರು, ವೆಬ್‌ಸೈಟ್‌ಗಳಿಗೆ ನಿರ್ಬಂಧ ವಿಧಿಸಿದ ದೆಹಲಿ ನ್ಯಾಯಾಲಯ

- Advertisement -
- Advertisement -

ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಅದಾನಿ ಎಂಟರ್‌ಪ್ರೈಸಸ್ ಬಗ್ಗೆ ಮಾನನಷ್ಟಕರ ವಿಷಯಗಳನ್ನು ಪ್ರಕಟಿಸದಂತೆ ದೆಹಲಿ ನ್ಯಾಯಾಲಯವು ಶನಿವಾರ ಐವರು ಪತ್ರಕರ್ತರು ಮತ್ತು ಕೆಲವು ವೆಬ್‌ಸೈಟ್‌ಗಳಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಪತ್ರಕರ್ತರಾದ ಪರಂಜೋಯ್ ಗುಹಾ ಠಾಕೂರ್ತಾ, ರವಿ ನಾಯರ್, ಅಬೀರ್ ದಾಸ್‌ಗುಪ್ತ, ಆಯಸ್ಕಾಂತ್ ದಾಸ್, ಆಯುಷ್ ಜೋಶಿ ಮತ್ತು ವೆಬ್‌ಸೈಟ್‌ಗಳಾದ ಪರಂಜೋಯ್ ಡಾಟ್ ಇನ್, ಅದಾನಿ ವಾಚ್ ಡಾಟ್ ಓಆರ್‌ಜಿ, ಮತ್ತು ಅದಾನಿ ಫೈಲ್ಸ್ ಡಾಟ್ ಕಾಮ್ ಡಾಟ್ ಎಯುಗೆ ನಿರ್ಬಂಧ ವಿಧಿಸಲಾಗಿದೆ.

ದೆಹಲಿಯ ರೋಹಿಣಿ ನ್ಯಾಯಾಲಯದ ವಿಶೇಷ ಸಿವಿಲ್ ನ್ಯಾಯಾಧೀಶ ಅನುಜ್ ಕುಮಾರ್ ಸಿಂಗ್ ಅವರು ಅದಾನಿ ಎಂಟರ್‌ಪ್ರೈಸಸ್ ಪರವಾಗಿ ತಡೆಯಾಜ್ಞೆ ಹೊರಡಿಸಿದ್ದು, ಪ್ರತಿವಾದಿಗಳು ತಮ್ಮ ಲೇಖನಗಳು ಅಥವಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಂದ ವಿಷಯವನ್ನು ತೆಗೆದುಹಾಕುವಂತೆ ನಿರ್ದೇಶಿಸಿದ್ದಾರೆ.

ತಕ್ಷಣ ವಿಷಯವನ್ನು ತೆಗೆದುಹಾಕಲು ಸಾಧ್ಯವಾಗದಿದ್ದರೆ, ಐದು ದಿನಗಳಲ್ಲಿ ತೆಗೆದುಹಾಕುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಆದಾಗ್ಯೂ, ‘ನ್ಯಾಯಯುತ, ಪರಿಶೀಲಿಸಿದ ಮತ್ತು ಸಮರ್ಥನೀಯ’ ವರದಿ ಮಾಡುವಿಕೆಯಿಂದ ಮತ್ತು ಅಂತಹ ಲೇಖನಗಳು, ಪೋಸ್ಟ್‌ಗಳು ಅಥವಾ ವೆಬ್‌ಪುಟ ಲಿಂಕ್‌ಗಳನ್ನು ಹೋಸ್ಟ್ ಮಾಡುವುದು, ಸಂಗ್ರಹಿಸುವುದು ಅಥವಾ ಪ್ರಸಾರ ಮಾಡುವುದರಿಂದ ಪ್ರತಿವಾದಿಗಳನ್ನು ನಿರ್ಬಂಧಿಸುವ ಸಂಪೂರ್ಣ ಆದೇಶವನ್ನು ತಾನು ನೀಡುತ್ತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಇದು, ಪತ್ರಕರ್ತರು, ಹೋರಾಟಗಾರರು ಮತ್ತು ಸಂಸ್ಥೆಗಳು ಕಂಪನಿಯ ಖ್ಯಾತಿಗೆ ಹಾನಿ ಮಾಡಿದ್ದಾರೆ ಮತ್ತು ಅದರ ಪಾಲುದಾರರಿಗೆ ಶತಕೋಟಿ ಡಾಲರ್‌ಗಳಷ್ಟು ನಷ್ಟವನ್ನುಂಟುಮಾಡಿದ್ದಾರೆ ಎಂದು ಆರೋಪಿಸಿ ಅದಾನಿ ಎಂಟರ್‌ಪ್ರೈಸಸ್ ಸಲ್ಲಿಸಿದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಪ್ರಕರಣ ಎಂದು ಬಾರ್ ಮತ್ತು ಬೆಂಚ್ ವರದಿ ಹೇಳಿದೆ.

ಅದಾನಿ ಎಂಟರ್‌ಪ್ರೈಸಸ್, ಅದಾನಿ ಗ್ರೂಪ್‌ನ ಪ್ರಮುಖ ಕಂಪನಿಯಾಗಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ಪತ್ರಕರ್ತರು ಮತ್ತು ಹೋರಾಟಗಾರರು ‘ಭಾರತ ವಿರೋಧಿ ಹಿತಾಸಕ್ತಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ’ ಮತ್ತು ‘ಗುಪ್ತ ಉದ್ದೇಶಗಳೊಂದಿಗೆ’ ಕಂಪನಿಯ ಮೂಲಸೌಕರ್ಯ ಮತ್ತು ಇಂಧನ ಯೋಜನೆಗಳನ್ನು ನಿರಂತರವಾಗಿ ಗುರಿಯಾಗಿಸಿಕೊಂಡಿದ್ದಾರೆ ಎಂದು ಅದಾನಿ ಎಂಟರ್‌ಪ್ರೈಸಸ್‌ನ ವಕೀಲರು ವಾದಿಸಿದ್ದಾರೆ.

“ಭಾರತಕ್ಕೆ ಪ್ರಮುಖ ಸಂಪನ್ಮೂಲಗಳನ್ನು ಪಡೆಯುವ ಗುರಿಯನ್ನು ಹೊಂದಿರುವ’ ಆಸ್ಟ್ರೇಲಿಯಾದಲ್ಲಿನ ತನ್ನ ಕಾರ್ಯಾಚರಣೆಗಳು ‘ಪ್ರಯಾಸಕರ ಮತ್ತು ವಿಳಂಬಗೊಂಡಿವೆ ಮತ್ತು ಪದೇ ಪದೇ ಅಡಚಣೆಯಾಗಿವೆ. ಪ್ರತಿವಾದಿ ವರದಿಗಾರರು, ಹೋರಾಟಗಾರರು ಮತ್ತು ಸಂಸ್ಥೆಗಳ ಹಸ್ತಕ್ಷೇಪದಿಂದಾಗಿ ಅಭಿವೃದ್ಧಿಯನ್ನು ಹಿಂದಕ್ಕೆ ತಳ್ಳಲಾಗಿದೆ” ಎಂದು ಅದಾನಿ ಎಂಟರ್‌ಪ್ರೈಸಸ್ ನ್ಯಾಯಾಲಯಕ್ಕೆ ತಿಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...