Homeಮುಖಪುಟಅಬಕಾರಿ ನೀತಿ ಪ್ರಕರಣ : ಅರವಿಂದ್ ಕೇಜ್ರಿವಾಲ್ ಮೂರು ದಿನ ಸಿಬಿಐ ಕಸ್ಟಡಿಗೆ

ಅಬಕಾರಿ ನೀತಿ ಪ್ರಕರಣ : ಅರವಿಂದ್ ಕೇಜ್ರಿವಾಲ್ ಮೂರು ದಿನ ಸಿಬಿಐ ಕಸ್ಟಡಿಗೆ

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಕೇಂದ್ರ ತನಿಖಾ ದಳ (ಸಿಬಿಐ) ಕಸ್ಟಡಿಗೆ ನೀಡಿದೆ.

ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ಅಮಿತಾಭ್ ರಾವತ್ ಅವರು, ಸಿಬಿಐ ಮತ್ತು ಕೇಜ್ರಿವಾಲ್ ಪರ ವಕೀಲರ ವಾದಗಳನ್ನು ಸುದೀರ್ಘವಾಗಿ ಆಲಿಸಿದ ನಂತರ ಈ ಆದೇಶ ಹೊರಡಿಸಿದ್ದಾರೆ.

ನ್ಯಾಯಾಧೀಶ ರಾವತ್ ಅವರು ತನಿಖೆಯಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನಂತರ, ಸಿಬಿಐ ಬುಧವಾರ ಔಪಚಾರಿಕವಾಗಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಐದು ದಿನಗಳ ಕಾಲ ಕಸ್ಟಡಿಗೆ ಕೇಳಿತ್ತು.

ವಿಚಾರಣೆಯ ಸಂದರ್ಭದಲ್ಲಿ, ಕೇಜ್ರಿವಾಲ್ ಅವರು, ನ್ಯಾಯಾಲಯವನ್ನು ವೈಯಕ್ತಿಕವಾಗಿ ಉದ್ದೇಶಿಸಿ ಪ್ರಕರಣದಲ್ಲಿ ಬಂಧಿತರಾಗಿರುವ ಮನೀಶ್ ಸಿಸೋಡಿಯಾ ಸೇರಿದಂತೆ ಇತರ ಎಎಪಿ ನಾಯಕರು ನಿರಪರಾಧಿಗಳು ಎಂದು ಸಮರ್ಥಿಸಿಕೊಂಡರು.

ಕೇಜ್ರಿವಾಲ್ ಸಂಪೂರ್ಣ ಆರೋಪವನ್ನು ಮನೀಶ್ ಸಿಸೋಡಿಯಾ ಮೇಲೆ ಹೊರಿಸಿದ್ದಾರೆ ಎಂಬ ಸಿಬಿಐ ಹೇಳಿಕೆಯನ್ನು ಅವರು ತಳ್ಳಿಹಾಕಿದರು.

ಕೇಜ್ರಿವಾಲ್ ಸಂಪೂರ್ಣ ಆರೋಪವನ್ನು ಸಿಸೋಡಿಯಾ ಮೇಲೆ ಹೊರಿಸಿದ್ದಾರೆ ಎಂದು ಪ್ರತಿಬಿಂಬಿಸಲು ಮಾಧ್ಯಮದ ಮುಖ್ಯಾಂಶಗಳನ್ನು ದುರ್ಬಳಕೆ ಮಾಡಿಕೊಳ್ಳುವುದು ಸಿಬಿಐ ಉದ್ದೇಶವಾಗಿದೆ ಎಂದು ಅವರು ಆರೋಪಿಸಿದರು. ಕೋರ್ಟ್ ಕೂಡ ಕೇಜ್ರಿವಾಲ್ ಅವರ ಮಾತನ್ನು ಒಪ್ಪಿದೆ.

ಪ್ರಕರಣದ ಹಿನ್ನೆಲೆ : ದೆಹಲಿಯ ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರನ್ನು ಮಾರ್ಚ್ 21, 2024 ರಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲು ಬಂಧಿಸಿತು.

ಕೆಲ ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಉದ್ದೇಶಪೂರ್ವಕವಾಗಿ ಮದ್ಯ ನೀತಿಯಲ್ಲಿ ಮಾರ್ಪಾಡು ಮಾಡಿದ ಹಗರಣದಲ್ಲಿ ಕೇಜ್ರಿವಾಲ್ ಪ್ರಮುಖ ಆರೋಪಿ ಎಂದು ಇಡಿ ಹೇಳಿತ್ತು.

ಮದ್ಯ ಮಾರಾಟಗಾರರಿಗೆ ಅನುಕೂಲವಾಗುವಂತೆ ಅಬಕಾರಿ ನೀತಿ ರೂಪಿಸಲು ಕೇಜ್ರಿವಾಲ್ ಕಿಕ್‌ಬ್ಯಾಕ್ ಪಡೆದಿದ್ದಾರೆ. ಆ ಹಣವನ್ನು ಗೋವಾ ವಿಧಾನಸಭೆ ಚುನಾವಣೆಗೆ ಎಎಪಿ ಬಳಸಿಕೊಂಡಿದೆ ಎಂದು ಆರೋಪಿಸಿತ್ತು.

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರ ದೂರಿನ ಮೇರೆಗೆ ಸಿಬಿಐ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಇಡಿ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.

ಮಾರ್ಚ್ 21 ರಂದು ಇಡಿಯಿಂದ ಬಂಧನಕ್ಕೊಳಗಾದ ನಂತರ ಕೇಜ್ರಿವಾಲ್ ಜೈಲಿನಲ್ಲಿಯೇ ಇದ್ದರು. ಈ ನಡುವೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 1ರವರೆಗೆ ಜಾಮೀನು ನೀಡಿ ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅವಕಾಶ ಮಾಡಿಕೊಟ್ಟಿತು. ಜೂನ್ 2 ರಂದು ಕೇಜ್ರಿವಾಲ್ ಜೈಲಿಗೆ ಮರಳಿದ್ದರು. ಅಂದಿನಿಂದ ಜೈಲಿನಲ್ಲೇ ಇದ್ದರು.

ನ್ಯಾಯಾಲಯದ ಅನುಮತಿಯೊಂದಿಗೆ ಸಿಬಿಐ ಈ ವಾರದ ಆರಂಭದಲ್ಲಿ ಕೇಜ್ರಿವಾಲ್ ಅವರಿಂದ ಹೇಳಿಕೆಯನ್ನು ದಾಖಲಿಸಿಕೊಂಡಾಗಲೂ ಅವರು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐ ನ್ಯಾಯಾಲಯದ ಅನುಮತಿ ಕೋರಿತ್ತು. ದೆಹಲಿಯ ವಿಚಾರಣಾ ನ್ಯಾಯಾಲಯದ ಮುಂದೆ ಸಂಕ್ಷಿಪ್ತ ವಿಚಾರಣೆಯ ನಂತರ, ಸಿಬಿಐ ಬುಧವಾರ ಮುಂಜಾನೆ ಕೇಜ್ರಿವಾಲ್ ಅವರನ್ನು ಔಪಚಾರಿಕವಾಗಿ ಬಂಧಿಸಿತ್ತು. ನಂತರ ಅವರ ಬಂಧನದ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿತ್ತು. ನಂತರ ಕೇಜ್ರಿವಾಲ್ ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿ ಸಿಬಿಐ ರೂಸ್ ಅವೆನ್ಯೂ ನ್ಯಾಯಾಲಯವನ್ನು ಕೋರಿತ್ತು.

ಇದನ್ನೂ ಓದಿ : ಭಾರತೀಯ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...