Homeಮುಖಪುಟವಂಚನೆ ಆರೋಪ : ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ

ವಂಚನೆ ಆರೋಪ : ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ

- Advertisement -
- Advertisement -

ವಂಚನೆ ಪ್ರಕರಣದಲ್ಲಿ ಬಿಜೆಪಿ ನಾಯಕ, ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರನ್ನು ಆರೋಪ ಮುಕ್ತಗೊಳಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಹಣ ಪಡೆದು ಮನೆಗಳನ್ನು ನೀಡಲು ವಿಫಲವಾದ ಗೌತಮ್‌ ಗಂಭೀರ್‌ ನಂಟು ಹೊಂದಿರುವ ಮೂರು ರಿಯಲ್‌ ಎಸ್ಟೇಟ್‌ ಕಂಪೆನಿಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ, ಹೆಚ್‌ಆರ್ ಇನ್‌ಫ್ರಾಸಿಟಿ ಮತ್ತು ಯುಎಂ ಆರ್ಕಿಟೆಕ್ಚರ್ಸ್ ವಿರುದ್ಧ ಮನೆ ಖರೀದಿದಾರರು ಪ್ರಕರಣ ದಾಖಲಿಸಿದ್ದರು. ಗಂಭೀರ್ ಅವರು ರುದ್ರಾದ ಹೆಚ್ಚುವರಿ ನಿರ್ದೇಶಕರಲ್ಲದೆ, ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿದ್ದರು.

ಪ್ರಕರಣ ಮುಕ್ತಾಯಗೊಳಿಸುವಂತೆ ಮ್ಯಾಜಿಸ್ಟೇಟ್‌ ನ್ಯಾಯಾಲಯ ನೀಡಿದ ಆದೇಶ ಸಂಸದರಾಗಿದ್ದ ಗಂಭೀರ್‌ ಅವರ ವಿರುದ್ಧದ ಆರೋಪಗಳ ಕುರಿತು ತೀರ್ಪು ನೀಡುವಲ್ಲಿ ‘ಮನಸ್ಸೊಂದರ ಅಸಮರ್ಪಕ ಅಭಿವ್ಯಕ್ತಿ’ಯಾಗಿದೆ ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಹೇಳಿದ್ದಾರೆ.

ಬ್ರ್ಯಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿದ್ದ ಗಂಭೀರ್ ವಿರುದ್ಧದ ಆರೋಪಗಳು ಹೆಚ್ಚಿನ ತನಿಖೆಗೆ ಅರ್ಹವಾಗಿವೆ. ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿಯಲ್ಲಿ ಗಂಭೀರ್‌ ಅವರ ಪಾತ್ರ ಇದೆ ಎಂದಿರುವ ನ್ಯಾಯಾಯಲ, ಹೂಡಿಕೆದಾರರ ಹಣ ಗಂಭೀರ್‌ ಅವರ ಪಾಲಾಗಿದೆಯೇ? ಎಂದು ಕೂಡ ಪ್ರಶ್ನಿಸಿದೆ.

ರುದ್ರಾದ ಹೆಚ್ಚುವರಿ ನಿರ್ದೇಶಕರಾಗಿದ್ದ ಗಂಭೀರ್, ಬ್ರ್ಯಾಂಡ್‌ ಅಂಬಾಸಿಡರ್ ಅಷ್ಟೇ ಆಗಿರದೆ, ಕಂಪನಿಯೊಂದಿಗೆ ಹಣಕಾಸಿನ ವಹಿವಾಟುಗಳನ್ನು ಹೊಂದಿದ್ದಾರೆ. ಆದರೆ ಉಳಿದ ಆರೋಪಿಗಳೊಡನೆ ಗಂಭೀರ್‌ ಅವರ ಆರೋಪಗಳನ್ನು ಮ್ಯಾಜಿಸ್ಟೇಟ್‌ ನ್ಯಾಯಾಲಯದ ಆದೇಶ ಸಾಮಾನ್ಯೀಕರಿಸಿದೆ ಎಂದು ಅದು ಹೇಳಿದೆ.

ನಡೆದಿರುವ ವಂಚನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅನುಸೂಚಿತ ಅಪರಾಧವಾಗಿರುವುದರಿಂದ, ಪ್ರಕರಣವನ್ನು ಇಡಿ ತನಿಖೆ ಮಾಡಬೇಕಾದ ಅಗತ್ಯ ಬೀಳಬಹುದು ಎಂದು ನ್ಯಾಯಾಲಯ ಅಭಿಮತ ವ್ಯಕ್ತಪಡಿಸಿದೆ.

ದೆಹಲಿಯ ರೌಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಚಾರಣಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಮೂರು ಪರಿಶೀಲನಾ ಅರ್ಜಿಗಳನ್ನು ಅದೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ : ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಟಿ-ಶರ್ಟ್ ವಿರುದ್ಧ ಕೋರ್ಟ್‌ಗೆ ಅರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...