Homeಮುಖಪುಟಮಾನನಷ್ಟ ಪ್ರಕರಣ : ಮೇಧಾ ಪಾಟ್ಕರ್‌ಗೆ ವಿಧಿಸಿದ್ದ ಜೈಲು ಶಿಕ್ಷೆ ಅಮಾನತು

ಮಾನನಷ್ಟ ಪ್ರಕರಣ : ಮೇಧಾ ಪಾಟ್ಕರ್‌ಗೆ ವಿಧಿಸಿದ್ದ ಜೈಲು ಶಿಕ್ಷೆ ಅಮಾನತು

- Advertisement -
- Advertisement -

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರಿಗೆ ವಿಧಿಸಲಾಗಿದ್ದ ಐದು ತಿಂಗಳ ಸಾದಾ ಜೈಲು ಶಿಕ್ಷೆಯನ್ನು ದೆಹಲಿಯ ಸಾಕೇತ್ ನ್ಯಾಯಾಲಯ ಅಮಾನತುಗೊಳಿಸಿದೆ.

ಮೇಧಾ ಪಾಟ್ಕರ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಶಿಕ್ಷೆಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಅಲ್ಲದೆ, ಪ್ರಕರಣ ದಾಖಲಿಸಿದ್ದ ವಿ.ಕೆ ಸಕ್ಸೇನಾ ಅವರಿಗೆ ನೋಟಿಸ್ ನೀಡಿದ್ದಾರೆ. ರೂ. 25 ಸಾವಿರ ಶ್ಯೂರಿಟಿ ಬಾಂಡ್ ಇಡಲು ಸೂಚಿಸಿ, ಮೇಧಾ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ನಿಗದಿಪಡಿಸಲಾಗಿದ್ದು, ಅದಕ್ಕೂ ಮುನ್ನ ಉತ್ತರ ನೀಡುವಂತೆ ವಿ.ಕೆ ಸಕ್ಸೇನಾ ಅವರಿಗೆ ಸೂಚಿಸಲಾಗಿದೆ ಎಂದು ಸಕ್ಸೇನಾ ಪರ ವಕೀಲ ಗಜಿಂದರ್ ಕುಮಾರ್ ಹೇಳಿದ್ದಾರೆ.

ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿ.ಕೆ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮತ್ತು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರಿಗೆ ಐದು ತಿಂಗಳ ಜೈಲು ಶಿಕ್ಷೆ ವಿಧಿಸಿ ದೆಹಲಿಯ ನ್ಯಾಯಾಲಯ ಜುಲೈ 1, 2024ರಂದು ಆದೇಶಿಸಿತ್ತು.

2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ”ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದರು.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ”ಎಂದಿದ್ದರು.

ಇದನ್ನೂ ಓದಿ : ಅಲೋಪತಿ, ಕೊರೋನಿಲ್ ಕುರಿತ ಹೇಳಿಕೆ ತೆಗೆಯಿರಿ: ರಾಮ್‌ದೇವ್‌, ಬಾಲಕೃಷ್ಣಗೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...