Homeಅಂತರಾಷ್ಟ್ರೀಯಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಇಂಟರ್​​ನ್ಯಾಷನಲ್ ಎಮ್ಮಿ ಪ್ರಶಸ್ತಿ ಮುಡಿಗೇರಿಸಿಕೊಂಡ ’ಡೆಲ್ಲಿ ಕ್ರೈಂ’ ವೆಬ್ ಸರಣಿ!

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ

- Advertisement -
- Advertisement -

ನೆಟ್​​ಫ್ಲಿಕ್ಸ್​ನ ’ಡೆಲ್ಲಿ ಕ್ರೈಂ’ ಭಾರತೀಯ ವೆಬ್ ಸರಣಿ 48 ನೇ ಇಂಟರ್​​ನ್ಯಾಷನಲ್ ಎಮ್ಮಿ ಅವಾರ್ಡ್​-2020ನ ಬೆಸ್ಟ್ ಡ್ರಾಮಾ ಸೀರಿಸ್ ಪ್ರಶಸ್ತಿ ಮುಡಿಗೆರಿಸಿಕೊಂಡಿದೆ. ಟಿವಿ ಶೋಗಳಿಗೆ ನೀಡಲಾಗುವ ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದೆ.

ಡೆಲ್ಲಿ ಕ್ರೈಂ ವೆಬ್​ ಸೀರಿಸ್​, 2012 ರ ದೆಹಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಆಧರಿಸಿದ ಕಥೆಯನ್ನು ಹೊಂದಿದೆ. ಶೆಫಾಲಿ ಶಾ ಪೊಲೀಸ್ ಉಪ ಆಯುಕ್ತರ ಪಾತ್ರವನ್ನು ನಿರ್ವಹಿಸಿದ್ದು, ಅಪರಾಧಿಗಳನ್ನು ಹುಡುಕುವ ರೋಚಕ ಸನ್ನಿವೇಶಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಡೆಲ್ಲಿ ಕ್ರೈಂ ನಿರ್ದೇಶಕ ರಿಚೀ ಮೆಹ್ತಾ ಈ ಪ್ರಶಸ್ತಿಯನ್ನು ’ಮಹಿಳೆಯರಿಗೆ’ ಅರ್ಪಿಸಿದ್ದಾರೆ. “ನಾನು ಈ ಪ್ರಶಸ್ತಿಯನ್ನು ಎಲ್ಲಾ ಮಹಿಳೆಯರಿಗೆ ಅರ್ಪಿಸುತ್ತೇನೆ. ಅನೇಕ ಮಹಿಳೆಯರು ಪುರುಷರು ತಮ್ಮ ಮೇಲೆ ಮಾಡುವ ದೌರ್ಜನ್ಯದ ವಿರುದ್ಧ ನಿಲ್ಲುವುದರ ಜೊತೆಗೆ, ಆ ಸಮಸ್ಯೆಯನ್ನು ಪರಿಹರಿಸುವ ಕಾರ್ಯವನ್ನು ಮಾಡುತ್ತಾರೆ. ಅಂತಿಮವಾಗಿ, ಈ ಪ್ರಶಸ್ತಿ ದಣಿವರಿಯದ ಆ ತಾಯಿ ಮತ್ತು ಅವರ ಮಗಳಿಗೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತಾಬ್ ಬಚ್ಚನ್ ಅಭಿನಯದ ಚಿತ್ರ ಬಿಡುಗಡೆಗೆ ನಿಷೇಧ; ತೆರವು ಅರ್ಜಿ ವಜಾಗೊಳಿಸಿದ ಸುಪ್ರೀಂ!

 

ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಪಡೆದ ಸಂಭ್ರಮವನ್ನು ಅನೇಕ ನಟ, ನಟಿಯರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ವೆಬ್ ಸೀರಿಸ್‌ನಲ್ಲಿ ಪೋಲೀಸ್ ಪಾತ್ರವನ್ನು ನಿರ್ವಹಿಸಿದ ಶೆಫಾಲಿ ಷಾ, ಪ್ರಶಸ್ತಿ ಕಾರ್ಯಕ್ರಮದ ವಿಡಿಯೋ ಹಂಚಿಕೊಂಡಿದ್ದು, ‘ಓ ಮೈ ಗಾಡ್’ ಎಂದು ಕೋಟ್ ಮಾಡಿದ್ದಾರೆ.

 

View this post on Instagram

 

A post shared by Shefali Shah (@shefalishahofficial)

ಶೆಫಾಲಿ ಷಾ ಪೋಸ್ಟ್‌ಗೆ ನಟ ಹೃತಿಕ್ ರೋಷನ್ ವಾವ್, ವಾವ್, ವಾವ್ ಎಂದು ಕಾಮೆಂಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ಡೆಲ್ಲಿ ಕ್ರೈಂಗೆ ಎಮ್ಮಿ ಪ್ರಶಸ್ತಿ ಒಲಿದುಬಂದಿರುವುದಕ್ಕೆ ಬಾಲಿವುಡ್​ನ ಅನೇಕ ತಾರೆಯರು ಹರ್ಷ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಭಾರತವು ಅತ್ಯುತ್ತಮ ನಟ ವಿಭಾಗದಲ್ಲಿ ಮೇಡ್ ಇನ್ ಹೆವನ್ ನಟ ಅರ್ಜುನ್ ಮಾಥುರ್ ಮತ್ತು ಅತ್ಯುತ್ತಮ ಕಾಮಿಡಿ ಸೀರೀಸ್​ ವಿಭಾಗದಲ್ಲಿ ಅಮೇಜಾನ್​ ಪ್ರೈಂನ ಫೋರ್​ ಮೋರ್ ಶಾಟ್ಸ್​ ಪ್ಲೀಸ್​ ವೆಬ್ ಸೀರಿಸ್  ನಾಮನಿರ್ದೇಶನ ಮಾಡಲಾಗಿತ್ತು.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ನ್ಯೂಯಾರ್ಕ್ ನಗರದ ಖಾಲಿ ರಂಗಮಂದಿರದಿಂದ ನಟ ರಿಚರ್ಡ್ ಕೈಂಡ್ ಈ ಅಂತರಾಷ್ಟ್ರೀಯ ಎಮ್ಮಿ ಪ್ರಶಸ್ತಿ ಕಾರ್ಯಕ್ರಮ ನಡೆಸಿಕೊಟ್ಟರು.


ಇದನ್ನೂ ಓದಿ: ಸಾಮಾಜಿಕ ಜಾಲತಾಣಿಗರು ನೋಡಲೇಬೇಕಾದ ಚಿತ್ರ ‘ದಿ ಸೋಷಲ್ ಡೈಲೆಮಾ’: ನಮಗೇನಾದರೂ ಪಾಠಗಳಿವೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...